ಬ್ರೇಕಿಂಗ್ ನ್ಯೂಸ್
04-05-26 06:27 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಪೈಪೋಟಿ ನಿರೀಕ್ಷಿಸಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಎಕೆಎಂ ಅಶ್ರಫ್ ಎರಡನೇ ಬಾರಿಗೆ ಭಾರೀ ಅಂತರದ ಜಯ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಅಶ್ರಫ್ ಅವರು 29252 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.
ನಿಕಟ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ 67696 ಮತಗಳನ್ನು ಪಡೆದಿದ್ದರೆ, ಸಿಪಿಎಂ ಪಕ್ಷದ ಕೆ.ಆರ್ ಜಯಾನಂದ್ ಕೇವಲ 21212 ಮತಗಳನ್ನು ಪಡೆದು ಹೀನಾಯ ಸೋಲನುಭವಿಸಿದ್ದಾರೆ. ಉಳಿದಂತೆ, ಪಕ್ಷೇತರ ಸ್ಪರ್ಧಿಸಿದ್ದ ಜೀನ್ ಲವಿನಾ ಮೊಂತೇರೊ 523, ಕಣ್ಣೂರು ಅಬ್ದಲ್ಲ ಮಾಸ್ಟರ್ 283, ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸಂಜೀವ 213 ಮತ ಪಡೆದಿದ್ದಾರೆ.

ಈ ಹಿಂದೆ ಮಂಜೇಶ್ವರದಲ್ಲಿ ಎರಡು ಬಾರಿ ಬಿಜೆಪಿಯ ಸುರೇಂದ್ರನ್ ಅತಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರಿಂದ ಈ ಬಾರಿ ಗೆಲುವಿನ ಭರವಸೆ ಹುಟ್ಟಿಸಿದ್ದರು. ಇದಕ್ಕಾಗಿ ಬಿಜೆಪಿಯಿಂದ ಭಾರೀ ಶ್ರಮ ಹಾಕಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ತಿಂಗಳ ಕಾಲ ಪ್ರಚಾರದಲ್ಲಿ ತೊಡಗಿದ್ದರು. 2016ರಲ್ಲಿ 89 ಮತಗಳಿಂದ ಸೋತಿದ್ದರೆ, 2021ರಲ್ಲಿ ಸುರೇಂದ್ರನ್ 645 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಈ ಬಾರಿ ಮತ ಪರಿಷ್ಕರಣೆ ಬಳಿಕ ನಡೆದ ಚುನಾವಣೆಯಲ್ಲಿ ಕೇರಳದಲ್ಲಿ ಮಂಜೇಶ್ವರ, ಕಾಸರಗೋಡು, ತಿರುವನಂತಪುರಂ, ಪಾಲಕ್ಕಾಡ್ ಸೇರಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಭರವಸೆ ಹುಟ್ಟಿಸಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ದಿಗಿಲಾಗುವಂತೆ ಮತ ಗಳಿಕೆ ಪ್ರಮಾಣವೇ ಭಾರೀ ಕಡಿಮೆಯಾಗಿದೆ. ಕಮ್ಯುನಿಸ್ಟ್ ಪಕ್ಷಕ್ಕೆ ಬೀಳುತ್ತಿದ್ದ ಮತಗಳೇ ಖೋತಾ ಆಗಿದ್ದು ಈವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಮತಗಳನ್ನು ಗಳಿಸಲಷ್ಟೆ ಎಡರಂಗ ಶಕ್ತವಾಗಿದೆ. ಬಿಜೆಪಿಗೂ ಸಾಂಪ್ರದಾಯಿಕ ಮತಗಳಷ್ಟೇ ಬಿದ್ದಿದ್ದು ಹೆಚ್ಚುವರಿ ಸಾಧನೆಯಾಗದಿರುವುದು ಕಂಡುಬಂದಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am