ಬ್ರೇಕಿಂಗ್ ನ್ಯೂಸ್
04-05-26 06:27 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಪೈಪೋಟಿ ನಿರೀಕ್ಷಿಸಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಎಕೆಎಂ ಅಶ್ರಫ್ ಎರಡನೇ ಬಾರಿಗೆ ಭಾರೀ ಅಂತರದ ಜಯ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಅಶ್ರಫ್ ಅವರು 29252 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.
ನಿಕಟ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ 67696 ಮತಗಳನ್ನು ಪಡೆದಿದ್ದರೆ, ಸಿಪಿಎಂ ಪಕ್ಷದ ಕೆ.ಆರ್ ಜಯಾನಂದ್ ಕೇವಲ 21212 ಮತಗಳನ್ನು ಪಡೆದು ಹೀನಾಯ ಸೋಲನುಭವಿಸಿದ್ದಾರೆ. ಉಳಿದಂತೆ, ಪಕ್ಷೇತರ ಸ್ಪರ್ಧಿಸಿದ್ದ ಜೀನ್ ಲವಿನಾ ಮೊಂತೇರೊ 523, ಕಣ್ಣೂರು ಅಬ್ದಲ್ಲ ಮಾಸ್ಟರ್ 283, ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸಂಜೀವ 213 ಮತ ಪಡೆದಿದ್ದಾರೆ.

ಈ ಹಿಂದೆ ಮಂಜೇಶ್ವರದಲ್ಲಿ ಎರಡು ಬಾರಿ ಬಿಜೆಪಿಯ ಸುರೇಂದ್ರನ್ ಅತಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರಿಂದ ಈ ಬಾರಿ ಗೆಲುವಿನ ಭರವಸೆ ಹುಟ್ಟಿಸಿದ್ದರು. ಇದಕ್ಕಾಗಿ ಬಿಜೆಪಿಯಿಂದ ಭಾರೀ ಶ್ರಮ ಹಾಕಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ತಿಂಗಳ ಕಾಲ ಪ್ರಚಾರದಲ್ಲಿ ತೊಡಗಿದ್ದರು. 2016ರಲ್ಲಿ 89 ಮತಗಳಿಂದ ಸೋತಿದ್ದರೆ, 2021ರಲ್ಲಿ ಸುರೇಂದ್ರನ್ 645 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಈ ಬಾರಿ ಮತ ಪರಿಷ್ಕರಣೆ ಬಳಿಕ ನಡೆದ ಚುನಾವಣೆಯಲ್ಲಿ ಕೇರಳದಲ್ಲಿ ಮಂಜೇಶ್ವರ, ಕಾಸರಗೋಡು, ತಿರುವನಂತಪುರಂ, ಪಾಲಕ್ಕಾಡ್ ಸೇರಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಭರವಸೆ ಹುಟ್ಟಿಸಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ದಿಗಿಲಾಗುವಂತೆ ಮತ ಗಳಿಕೆ ಪ್ರಮಾಣವೇ ಭಾರೀ ಕಡಿಮೆಯಾಗಿದೆ. ಕಮ್ಯುನಿಸ್ಟ್ ಪಕ್ಷಕ್ಕೆ ಬೀಳುತ್ತಿದ್ದ ಮತಗಳೇ ಖೋತಾ ಆಗಿದ್ದು ಈವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಮತಗಳನ್ನು ಗಳಿಸಲಷ್ಟೆ ಎಡರಂಗ ಶಕ್ತವಾಗಿದೆ. ಬಿಜೆಪಿಗೂ ಸಾಂಪ್ರದಾಯಿಕ ಮತಗಳಷ್ಟೇ ಬಿದ್ದಿದ್ದು ಹೆಚ್ಚುವರಿ ಸಾಧನೆಯಾಗದಿರುವುದು ಕಂಡುಬಂದಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm