ಬ್ರೇಕಿಂಗ್ ನ್ಯೂಸ್
04-05-26 07:16 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 4: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುವಾಗಿದ್ದು ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಗೆಲುವಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ. 52 ಮತಗಳ ಮುನ್ನಡೆಯೊಂದಿಗೆ, ಡಿಎನ್ ಜೀವರಾಜ್ ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು. ಆದರೆ, ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಪ್ರಿಲ್ 6ರಂದು ಪೋಸ್ಟಲ್ ಬ್ಯಾಲೆಟ್ಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಈ ಪ್ರಕ್ರಿಯೆ ಆರಂಭವಾಗಿ ಮಧ್ಯರಾತ್ರಿ ವರೆಗೂ ಮುಂದುವರಿಯಿತು. ಮರು ಪರಿಶೀಲನೆ ವೇಳೆ ಫಲಿತಾಂಶದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ.
ಜೀವರಾಜ್ ಅವರಿಗೆ ಮೊದಲು 692 ಮತಗಳು ಇದ್ದರೆ, ಮರು ಎಣಿಕೆಯಲ್ಲಿ 690 ಮಾನ್ಯ ಮತಗಳು ಲಭ್ಯವಾಗಿವೆ. ಆದರೆ, ರಾಜೇಗೌಡರ ಮತಗಳು 569ರಿಂದ ನೇರವಾಗಿ 314ಕ್ಕೆ ಇಳಿದಿದ್ದು, 255 ಮತಗಳ ಕಡಿತ ಕಂಡುಬಂದಿದೆ. ಈ ದೊಡ್ಡ ವ್ಯತ್ಯಾಸವೇ ಅಂತಿಮ ಫಲಿತಾಂಶವನ್ನು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ.
ಫಲಿತಾಂಶ ಬೆನ್ನಲ್ಲೇ ಚುನಾವಣಾಧಿಕಾರಿಗಳು ಜನಪ್ರತಿನಿಧಿತ್ವ ಕಾಯ್ದೆ 1951 ಮತ್ತು ಚುನಾವಣಾ ನಿಯಮಾವಳಿಗಳ ಪ್ರಕಾರ ಜೀವರಾಜ್ ಅವರನ್ನು ಅಧಿಕೃತವಾಗಿ ಶಾಸಕರಾಗಿ ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ರಾಜೇಗೌಡರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಗೌಡರು ಮರು ಎಣಿಕೆ ಪ್ರಕ್ರಿಯೆ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ತಮ್ಮ ಪರವಾಗಿ ಬಂದಿದ್ದ ಕೆಲವು ಬ್ಯಾಲೆಟ್ಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm