ಬ್ರೇಕಿಂಗ್ ನ್ಯೂಸ್
04-05-26 07:16 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 4: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುವಾಗಿದ್ದು ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಗೆಲುವಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ. 52 ಮತಗಳ ಮುನ್ನಡೆಯೊಂದಿಗೆ, ಡಿಎನ್ ಜೀವರಾಜ್ ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು. ಆದರೆ, ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಪ್ರಿಲ್ 6ರಂದು ಪೋಸ್ಟಲ್ ಬ್ಯಾಲೆಟ್ಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಈ ಪ್ರಕ್ರಿಯೆ ಆರಂಭವಾಗಿ ಮಧ್ಯರಾತ್ರಿ ವರೆಗೂ ಮುಂದುವರಿಯಿತು. ಮರು ಪರಿಶೀಲನೆ ವೇಳೆ ಫಲಿತಾಂಶದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ.
ಜೀವರಾಜ್ ಅವರಿಗೆ ಮೊದಲು 692 ಮತಗಳು ಇದ್ದರೆ, ಮರು ಎಣಿಕೆಯಲ್ಲಿ 690 ಮಾನ್ಯ ಮತಗಳು ಲಭ್ಯವಾಗಿವೆ. ಆದರೆ, ರಾಜೇಗೌಡರ ಮತಗಳು 569ರಿಂದ ನೇರವಾಗಿ 314ಕ್ಕೆ ಇಳಿದಿದ್ದು, 255 ಮತಗಳ ಕಡಿತ ಕಂಡುಬಂದಿದೆ. ಈ ದೊಡ್ಡ ವ್ಯತ್ಯಾಸವೇ ಅಂತಿಮ ಫಲಿತಾಂಶವನ್ನು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ.
ಫಲಿತಾಂಶ ಬೆನ್ನಲ್ಲೇ ಚುನಾವಣಾಧಿಕಾರಿಗಳು ಜನಪ್ರತಿನಿಧಿತ್ವ ಕಾಯ್ದೆ 1951 ಮತ್ತು ಚುನಾವಣಾ ನಿಯಮಾವಳಿಗಳ ಪ್ರಕಾರ ಜೀವರಾಜ್ ಅವರನ್ನು ಅಧಿಕೃತವಾಗಿ ಶಾಸಕರಾಗಿ ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ರಾಜೇಗೌಡರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಗೌಡರು ಮರು ಎಣಿಕೆ ಪ್ರಕ್ರಿಯೆ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ತಮ್ಮ ಪರವಾಗಿ ಬಂದಿದ್ದ ಕೆಲವು ಬ್ಯಾಲೆಟ್ಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am