ಬ್ರೇಕಿಂಗ್ ನ್ಯೂಸ್
07-05-26 03:10 pm HK News Staffer ಕರ್ನಾಟಕ
ಬೆಂಗಳೂರು, ಮೇ 7: ರಾಜ್ಯ ರಾಜಕಾರಣ ಮತ್ತು ಪೊಲೀಸ್ ಇಲಾಖೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡಿಜಿಪಿ ಡಾ. ಕೆ. ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಮಹಿಳಾ ಸಿಬ್ಬಂದಿಯೊಂದಿಗೆ ಕಚೇರಿಯಲ್ಲೇ ಅಸಭ್ಯವಾಗಿ ವರ್ತಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಅಮಾನತು ಆದೇಶವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ.
1993ರ ಬ್ಯಾಚ್ನ ಐಪಿಎಸ್ ಅಧಿಕಾರಿ ಆಗಿರುವ ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತೆ ಸೇವೆಗೆ ಮರು ಸೇರ್ಪಡೆಗೊಳಿಸಲಾಗಿದೆ. ಜೊತೆಗೆ ಅವರನ್ನು ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯನ್ನು ಸಿಐಡಿ ಡಿಜಿಪಿ ಹುದ್ದೆಗೆ ಸಮಾನವೆಂದು ಪರಿಗಣಿಸಲಾಗಿದೆ.
ಸಂಚಲನ ಸೃಷ್ಟಿಸಿದ್ದ ವೈರಲ್ ವಿಡಿಯೋ
ಕಳೆದ ಜನವರಿಯಲ್ಲಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ಮೂರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದವು. ಪೊಲೀಸ್ ಸಮವಸ್ತ್ರ ಧರಿಸಿದ್ದ ವೇಳೆ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಆಪ್ತವಾಗಿ ವರ್ತಿಸುತ್ತಿರುವ ದೃಶ್ಯಗಳು ವೈರಲ್ ಆಗಿದ್ದವು.
ವಿಡಿಯೋದಲ್ಲಿ ಮಹಿಳೆಯ ಮೈ-ಕೈ ಮುಟ್ಟುವುದು, ಚುಂಬಿಸುವ ರೀತಿಯ ದೃಶ್ಯಗಳು ಕಂಡುಬಂದಿದ್ದರಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಈ ಘಟನೆ ಭಾರೀ ಮುಜುಗರ ಉಂಟುಮಾಡಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸರ್ಕಾರ ಜನವರಿ 19ರಂದು ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಿತ್ತು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ ಅವರ ವಿರುದ್ಧ ಇಲಾಖಾ ಮಟ್ಟದಲ್ಲಿ ವಿಚಾರಣೆ ಆರಂಭವಾಗಿತ್ತು.
ಆದರೆ ಇದೀಗ ಅಮಾನತು ಆದೇಶವನ್ನು ವಾಪಸ್ ಪಡೆಯುವ ಮೂಲಕ ಸರ್ಕಾರ ರಿಲೀಫ್ ನೀಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬಿ.ಎಸ್. ಸಂಜಯ್ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.
“ನಾನು ಸಾಕಷ್ಟು ಸಫರ್ ಆಗಿದ್ದೇನೆ…”
ವೈರಲ್ ವಿಡಿಯೋ ಪ್ರಕರಣದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ರಾಮಚಂದ್ರ ರಾವ್, ಗೃಹ ಸಚಿವ ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದರು. “ನನ್ನ ಸಸ್ಪೆನ್ಶನ್ ಬಗ್ಗೆ ಮಾತಾಡಿದ್ದೇನೆ. ತನಿಖೆ ನಡೆಯುತ್ತಿದೆ. ನನ್ನ ಮೇಲೆ ಯಾವುದೇ ಕೇಸ್ ಇಲ್ಲ. ಈಗಲೇ ಸಾಕಷ್ಟು ಸಫರ್ ಆಗಿದ್ದೇನೆ, ದಯವಿಟ್ಟು ಬಿಡಿ,” ಎಂದು ಹೇಳಿದ್ದರು.
ನಿವೃತ್ತಿಗೆ ಮುನ್ನ ಮರುನೇಮಕ
ಮೂಲಗಳ ಪ್ರಕಾರ, ಇದೇ ತಿಂಗಳ 31ರಂದು ರಾಮಚಂದ್ರ ರಾವ್ ನಿವೃತ್ತಿಯಾಗಲಿದ್ದು, ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಸರ್ಕಾರ ಅವರ ಅಮಾನತು ಆದೇಶ ಹಿಂಪಡೆದು ಮರು ನೇಮಕ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಮತ್ತೆ ಇಂತಹ ಉನ್ನತ ಹುದ್ದೆಗೆ ನಿಯೋಜಿಸಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಚೇರಿಯಲ್ಲೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಕ್ಷ್ಯಗಳಿದ್ದರೂ ಸರ್ಕಾರ ಮೃದು ಧೋರಣೆ ತೋರುತ್ತಿರುವುದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am