ಬ್ರೇಕಿಂಗ್ ನ್ಯೂಸ್
08-05-26 08:05 pm HK News Staffer ಕರ್ನಾಟಕ
ಹೈದರಾಬಾದ್, ಮೇ 8: ತೆಲಂಗಾಣದಲ್ಲಿ 12ನೇ ಶತಮಾನದಲ್ಲಿ ಸ್ಥಾಪಿಸಿದ್ದು ಎನ್ನಲಾದ ಕಾಕತೀಯರ ಕಾಲದ ಪುರಾತನ ಶಿವ ದೇವಾಲಯವನ್ನು ಶಾಲಾ ಮೈದಾನಕ್ಕಾಗಿ ಧ್ವಂಸಗೊಳಿಸಲಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದೆ.
ವಾರಂಗಲ್ ಜಿಲ್ಲೆಯ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. 800 ವರ್ಷಗಳ ಇತಿಹಾಸದ ದೇವಾಲಯವನ್ನು ಧ್ವಂಸ ಮಾಡಿರುವುದಕ್ಕೆ ಸಾರ್ವಜನಿಕರು, ಹಿಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಮೈದಾನಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ವೇಳೆ ಜೆಸಿಬಿ ಬಳಸಿ ಹಳೆಯ ಪಾಳು ಬಿದ್ದ ಸ್ಥಿತಿಯಲ್ಲಿದ್ದ ಶಿವ ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಶಿವ ದೇವಾಲಯ 13ನೇ ಶತಮಾನದ ಕಾಕತೀಯರ ದೊರೆ ಗಣಪತಿ ದೇವನ ಕಾಲದಲ್ಲಿ ನಿರ್ಮಾಣವಾಗಿತ್ತು. ಕ್ರಿ.ಶ. 1231ರಲ್ಲಿ ಬರೆದ ಏಳು ಸಾಲುಗಳ ತೆಲುಗು ಶಾಸನವೂ ಇದೇ ದೇವಾಲಯದಲ್ಲಿ ದೊರಕಿತ್ತು. ಅದರಲ್ಲಿ ರಾಜನನ್ನು 'ಮಹಾರಾಜ' ಮತ್ತು 'ರಾಜಾಧಿರಾಜುಲು' ಎಂದು ಕರೆಯಲಾಗಿತ್ತು. ಇದನ್ನು ಗುರುತಿಸಿ 1965ರಲ್ಲಿ ರಾಜ್ಯದ ಪುರಾತತ್ವ ಮತ್ತು ಮುಜರಾಯಿ ಇಲಾಖೆಗೆ ಸೇರಿಸಲಾಗಿತ್ತು.
ಸಾರ್ವಜನಿಕರ ಪ್ರತಿಭಟನೆ ಮತ್ತು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರಕ್ಕೆ ಕೆಲವರು ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸ್ಥಳೀಯ ಜಿಲ್ಲಾ ಮಟ್ಟದ ಅಧಿಕಾರಿಗಳು ದೇಗುಲ ಮರು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬೇಕೆಂದೇ ದೇವಾಲಯವನ್ನು ನಾವು ಧ್ವಂಸ ಮಾಡಿಲ್ಲ. 30 ಎಕರೆ ಜಾಗದಲ್ಲಿ ಪೊದೆಗಳನ್ನು ಸ್ವಚ್ಛಗೊಳಿಸುವಾಗ ಶಿಥಿಲಗೊಂಡ ದೇವಾಲಯ ನೆಲಸಮ ಆಗಿದೆ. ಇದೇನೂ ಅಧಿಕೃತವಾಗಿ ರಕ್ಷಿತ ಸ್ಮಾರಕ ಎಂದು ದಾಖಲೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ವಾದಿಸಿದ್ದಾರೆ. ಜನರ ಆಕ್ರೋಶ ಹೆಚ್ಚುತ್ತಿದ್ದಂತೆ ದೇಗುಲ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm