ಬ್ರೇಕಿಂಗ್ ನ್ಯೂಸ್
08-05-26 08:05 pm HK News Staffer ಕರ್ನಾಟಕ
ಹೈದರಾಬಾದ್, ಮೇ 8: ತೆಲಂಗಾಣದಲ್ಲಿ 12ನೇ ಶತಮಾನದಲ್ಲಿ ಸ್ಥಾಪಿಸಿದ್ದು ಎನ್ನಲಾದ ಕಾಕತೀಯರ ಕಾಲದ ಪುರಾತನ ಶಿವ ದೇವಾಲಯವನ್ನು ಶಾಲಾ ಮೈದಾನಕ್ಕಾಗಿ ಧ್ವಂಸಗೊಳಿಸಲಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದೆ.
ವಾರಂಗಲ್ ಜಿಲ್ಲೆಯ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. 800 ವರ್ಷಗಳ ಇತಿಹಾಸದ ದೇವಾಲಯವನ್ನು ಧ್ವಂಸ ಮಾಡಿರುವುದಕ್ಕೆ ಸಾರ್ವಜನಿಕರು, ಹಿಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಮೈದಾನಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ವೇಳೆ ಜೆಸಿಬಿ ಬಳಸಿ ಹಳೆಯ ಪಾಳು ಬಿದ್ದ ಸ್ಥಿತಿಯಲ್ಲಿದ್ದ ಶಿವ ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಶಿವ ದೇವಾಲಯ 13ನೇ ಶತಮಾನದ ಕಾಕತೀಯರ ದೊರೆ ಗಣಪತಿ ದೇವನ ಕಾಲದಲ್ಲಿ ನಿರ್ಮಾಣವಾಗಿತ್ತು. ಕ್ರಿ.ಶ. 1231ರಲ್ಲಿ ಬರೆದ ಏಳು ಸಾಲುಗಳ ತೆಲುಗು ಶಾಸನವೂ ಇದೇ ದೇವಾಲಯದಲ್ಲಿ ದೊರಕಿತ್ತು. ಅದರಲ್ಲಿ ರಾಜನನ್ನು 'ಮಹಾರಾಜ' ಮತ್ತು 'ರಾಜಾಧಿರಾಜುಲು' ಎಂದು ಕರೆಯಲಾಗಿತ್ತು. ಇದನ್ನು ಗುರುತಿಸಿ 1965ರಲ್ಲಿ ರಾಜ್ಯದ ಪುರಾತತ್ವ ಮತ್ತು ಮುಜರಾಯಿ ಇಲಾಖೆಗೆ ಸೇರಿಸಲಾಗಿತ್ತು.
ಸಾರ್ವಜನಿಕರ ಪ್ರತಿಭಟನೆ ಮತ್ತು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರಕ್ಕೆ ಕೆಲವರು ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸ್ಥಳೀಯ ಜಿಲ್ಲಾ ಮಟ್ಟದ ಅಧಿಕಾರಿಗಳು ದೇಗುಲ ಮರು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬೇಕೆಂದೇ ದೇವಾಲಯವನ್ನು ನಾವು ಧ್ವಂಸ ಮಾಡಿಲ್ಲ. 30 ಎಕರೆ ಜಾಗದಲ್ಲಿ ಪೊದೆಗಳನ್ನು ಸ್ವಚ್ಛಗೊಳಿಸುವಾಗ ಶಿಥಿಲಗೊಂಡ ದೇವಾಲಯ ನೆಲಸಮ ಆಗಿದೆ. ಇದೇನೂ ಅಧಿಕೃತವಾಗಿ ರಕ್ಷಿತ ಸ್ಮಾರಕ ಎಂದು ದಾಖಲೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ವಾದಿಸಿದ್ದಾರೆ. ಜನರ ಆಕ್ರೋಶ ಹೆಚ್ಚುತ್ತಿದ್ದಂತೆ ದೇಗುಲ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm