ಬ್ರೇಕಿಂಗ್ ನ್ಯೂಸ್
11-05-26 09:36 pm HK News Staffer ಕರ್ನಾಟಕ
ನವದೆಹಲಿ, ಮೇ 11 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಮರು ಎಣಿಕೆ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂಕೋರ್ಟ್, ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರಿಯುವಂತೆ ಆದೇಶಿಸಿದೆ.
ಈ ಮೂಲಕ ಮರು ಮತ ಎಣಿಕೆಯಲ್ಲಿ ಗೆಲುವು ಸಾಧಿಸಿ ಇತ್ತೀಚೆಗಷ್ಟೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಡಿ.ಎನ್. ಜೀವರಾಜ್ ಅವರಿಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಹಾಗೂ ಅದರ ನಂತರ ನಡೆದ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿದೆ.
ಜೊತೆಗೆ ಮರು ಮತ ಎಣಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಸದ್ಯಕ್ಕೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರು ಮತ್ತೆ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಮುಂದುವರಿಯಲಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆಲುವು ಸಾಧಿಸಿದ್ದರು. ಬಿಜೆಪಿಯ ಡಿ.ಎನ್. ಜೀವರಾಜ್ ಸೋಲು ಅನುಭವಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಇತ್ತೀಚೆಗೆ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರನ್ನು ವಿಜೇತರಾಗಿ ಘೋಷಿಸಿ ಪ್ರಮಾಣಪತ್ರ ನೀಡಿತ್ತು. ಬಳಿಕ ಅವರು ಶಾಸಕರಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟಿಕೊಂಡಿದೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm