ಬ್ರೇಕಿಂಗ್ ನ್ಯೂಸ್
14-05-26 10:19 am HK News Staffer ಕರ್ನಾಟಕ
ಬೆಂಗಳೂರು, ಮೇ 14: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಚಿಹ್ನೆಗಳು ಮತ್ತು ವಸ್ತ್ರಗಳನ್ನು ಧರಿಸಲು ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆ. 2022ರಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆದ ಸರ್ಕಾರ, ಈಗ ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್, ಪೇಟ ಸೇರಿದಂತೆ ಧಾರ್ಮಿಕ ಗುರುತುಗಳನ್ನು ನಿಗದಿತ ಸಮವಸ್ತ್ರದೊಂದಿಗೆ ಧರಿಸಲು ಅವಕಾಶ ನೀಡಿದೆ.
ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷ ಬಿಜೆಪಿ, ಹಿಂದೂಪರ ಸಂಘಟನೆಗಳು ಮತ್ತು ಹಲವು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ತುಷ್ಟೀಕರಣ ರಾಜಕಾರಣ” ಎಂದು ಆರೋಪಿಸಿದ್ದಾರೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಶಿಸ್ತು ಕಾಪಾಡುವ ಬದಲು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುವ ಕೆಲಸ ನಡೆಯುತ್ತಿದೆ ಎಂದು ವಿರೋಧ ಪಕ್ಷಗಳು ಕಿಡಿಕಾರಿವೆ.
ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಜಾಬ್ ನಿಷೇಧಿಸಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತ ಬ್ಯಾಂಕ್ ಉಳಿಸಿಕೊಳ್ಳಲು ಹಿಜಾಬ್ ಅಸ್ತ್ರ ಬಳಸುತ್ತಿದೆ. ಬೆಲೆ ಏರಿಕೆ, ಭ್ರಷ್ಟಾಚಾರ, ರೈತರ ಸಂಕಷ್ಟ, ಕಾನೂನು ಸುವ್ಯವಸ್ಥೆ ಹೀಗೆ ಜನರ ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ತಿರುಗಿಸಲು ಈ ನಿರ್ಧಾರ ಕೈಗೊಂಡಿದೆ” ಎಂದು ಆರೋಪಿಸಿದರು.
ಹೈಕೋರ್ಟ್ 2022ರಲ್ಲಿ ಶಾಲಾ-ಕಾಲೇಜುಗಳ ವಸ್ತ್ರಸಂಹಿತೆಯನ್ನು ಎತ್ತಿಹಿಡಿದಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮುಖ್ಯ ಎಂದು ಹೇಳಿದ್ದ ನ್ಯಾಯಾಲಯದ ಆಶಯವನ್ನೇ ಕಾಂಗ್ರೆಸ್ ಸರ್ಕಾರ ಗಾಳಿಗೆ ತೂರಿದೆ ಎಂದು ಅಶೋಕ್ ಟೀಕಿಸಿದರು. “ಒಂದು ಸಮುದಾಯದ ಹಿಜಾಬ್ಗೆ ಅವಕಾಶ ನೀಡಿ, ಕೇಸರಿ ಶಾಲುವಿಗೆ ಮಾತ್ರ ನಿರ್ಬಂಧ ಹೇರುವುದು ಯಾವ ಜಾತ್ಯತೀತತೆ?” ಎಂದು ಪ್ರಶ್ನಿಸಿದರು.
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡ ಸರ್ಕಾರದ ಆದೇಶದ ವಿರುದ್ಧ ಕಿಡಿಕಾರಿದ್ದು, “ಶಾಲಾ-ಕಾಲೇಜುಗಳಲ್ಲಿ ಸಮಾನತೆ ಇರಬೇಕು. ಆದರೆ ಸರ್ಕಾರ ಧರ್ಮದ ಆಧಾರದಲ್ಲಿ ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ಆದೇಶದ ಪ್ರತಿಯನ್ನು ರಾಜ್ಯಾದ್ಯಂತ ಹರಿದು ಹಾಕುತ್ತೇವೆ. ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ” ಎಂದು ಎಚ್ಚರಿಕೆ ನೀಡಿದರು.
ಇನ್ನೊಂದೆಡೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಕೂಡ ಸರ್ಕಾರವನ್ನು ಪ್ರಶ್ನಿಸಿದ್ದು, “1969ರಿಂದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ವ್ಯವಸ್ಥೆ ಜಾರಿಗೆ ಬಂದಿದೆ. ಅದರ ಉದ್ದೇಶವೇ ಮಕ್ಕಳಲ್ಲಿ ಭೇದಭಾವ ಬಾರದಂತೆ ನೋಡಿಕೊಳ್ಳುವುದು. ಈಗ ಧಾರ್ಮಿಕ ಚಿಹ್ನೆಗಳಿಗೆ ಅವಕಾಶ ನೀಡಿದರೆ ಸಮವಸ್ತ್ರದ ಅರ್ಥವೇನು?” ಎಂದು ಪ್ರಶ್ನಿಸಿದರು.
“ಹಿಜಾಬ್ ಧಾರ್ಮಿಕ ಚಿಹ್ನೆಯೋ ಅಥವಾ ಸಂಸ್ಕೃತಿಯ ಭಾಗವೋ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಹಿಜಾಬ್ಗೆ ಅವಕಾಶ ನೀಡಿ ಕೇಸರಿಯನ್ನು ನಿರಾಕರಿಸುವುದು ಏಕೆ? ಕೇಸರಿ ಬಣ್ಣದ ಹಿಜಾಬ್ ಹಾಕಿಕೊಂಡು ಬಂದರೆ ಸರ್ಕಾರದ ನಿಲುವೇನು?” ಎಂದು ಸಿ.ಟಿ. ರವಿ ಪ್ರಶ್ನಿಸಿದರು.
ಸರ್ಕಾರದ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಒಂದು ವಲಯ ಸರ್ಕಾರದ ಕ್ರಮವನ್ನು ವೈಯಕ್ತಿಕ ಸ್ವಾತಂತ್ರ್ಯದ ಭಾಗ ಎಂದು ಸಮರ್ಥಿಸಿಕೊಂಡರೆ, ಮತ್ತೊಂದು ವಲಯ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸುತ್ತಿದೆ.
ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಚಿಹ್ನೆಗಳಿಗೆ ಅವಕಾಶ ನೀಡಿದ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಮತ್ತೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಕ್ರಮಕ್ಕೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿವೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm