ಬ್ರೇಕಿಂಗ್ ನ್ಯೂಸ್
15-05-26 10:30 pm HK News Desk ಕರ್ನಾಟಕ
ವಿಜಯಪುರ, ಮೇ 15: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿರುವ ನಡುವೆ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಗ್ರಾಮಸ್ಥರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಮೃತರನ್ನು ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಪುತ್ರಿಯರಾದ ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ಗುರುನಾಥ ಬಡಿಗೇರ ತಮ್ಮ ಸ್ವಂತ ಮನೆಯ ದುರಸ್ಥಿ ಕಾರ್ಯ ನಡೆಸುತ್ತಿದ್ದ ಹಿನ್ನೆಲೆ, ತಾತ್ಕಾಲಿಕವಾಗಿ ಹಳೆಯ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಆದರೆ ಗುರುವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದು, ಕ್ಷಣಾರ್ಧದಲ್ಲೇ ನಾಲ್ವರೂ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಒಂದೇ ಕುಟುಂಬದ ನಾಲ್ವರನ್ನು ಕಳೆದುಕೊಂಡಿರುವ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಇತ್ತೀಚೆಗೆ ರಾಜ್ಯದಲ್ಲಿ ಅಕಾಲಿಕ ಮಳೆ ಮತ್ತು ಬಿರುಗಾಳಿಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳೆಯ ಹಾಗೂ ದುರ್ಬಲ ಮನೆಗಳಲ್ಲಿ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಗಳನ್ನು ನಿರ್ಲಕ್ಷ್ಯ ಮಾಡದೆ ಸುರಕ್ಷಿತ ಸ್ಥಳಗಳಿಗೆ ತೆರಳುವುದು ಜೀವ ರಕ್ಷಣೆಗಾಗಿ ಅತ್ಯಂತ ಅಗತ್ಯವಾಗಿದೆ.
ಭಾರೀ ಮಳೆ, ಗಾಳಿ ಅಥವಾ ಗುಡುಗು-ಸಿಡಿಲಿನ ಸಮಯದಲ್ಲಿ ಹಳೆಯ ಅಥವಾ ಹಾನಿಗೊಳಗಾದ ಮನೆಗಳಲ್ಲಿ ವಾಸಿಸುವುದನ್ನು ತಪ್ಪಿಸಿ. ಯಾವುದೇ ಅಪಾಯದ ಸೂಚನೆ ಕಂಡುಬಂದರೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಿ. ಜೀವಕ್ಕಿಂತ ದೊಡ್ಡದು ಯಾವುದೂ ಇಲ್ಲ.

ಸಚಿವರಿಂದ ಸಾಂತ್ವಾನ:
ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪರಿಶೀಲನೆ ನಡೆಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಈ ದುರ್ಘಟನೆ ನಡೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಸಾವಿಗೀಡಾದ ನಾಲ್ಕು ಜನರ ಕುಟುಂಬಕ್ಕೆ ತಲಾ ₹ 5 ಲಕ್ಷದಂತೆ ಒಟ್ಟು ₹ 20 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಬದುಕುಳಿದಿರುವ ಬಾಲಕ ವೀರೇಶ ಬಡಿಗೇರ ವಿದ್ಯಾಭ್ಯಾಸಕ್ಕೆ ನೆರವಾಗುವುದಾಗಿ ಹೇಳಿದರು.
ಪರಿಹಾರದ ಹಣವನ್ನು ಬಾಲಕನ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು ಎಂದರು.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm