ಬ್ರೇಕಿಂಗ್ ನ್ಯೂಸ್
17-05-26 08:55 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 17: ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅವುಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಕಾಡುಕೋಣ ಸೆರೆ ಕಾರ್ಯಾಚರಣೆಯ ಕುರಿತು ಮಧ್ಯ ಪ್ರದೇಶಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದರ ಅಂಗವಾಗಿ ಸರ್ಕಾರ ಕಾಡುಕೋಣ ಸೆರೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಡೆದ ಕಾರ್ಯಾಚರಣೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು ಅದರ ಕುರಿತ ಒಂದು ವರದಿ ಇಲ್ಲಿದೆ ನೋಡಿ.
ಎರಡು ದಿನಗಳಿಂದ ಕೊಪ್ಪ ಅರಣ್ಯ ವಿಭಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಶನಿವಾರ ಆಲ್ಲೂರು ವಿಭಾಗಕ್ಕೆ ಕಾರ್ಯಾಚರಣೆ ನಡೆಸಿದರು. ಅರೆನೂರು ಸಮೀಪದ ಹಕ್ಕಿಮಕ್ಕಿ ಸಮೀಪ ಆಗಾಗ್ಗೆ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡುಕೋಣಗೆ 4 ಗಂಟೆ ಸುಮಾರಿಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು. ವೈದ್ಯರಾದ ಡಾ. ರಮೇಶ್ ತಂಡ ಹಾಗೂ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಿದರು.

ಕೊಪ್ಪ ಅರಣ್ಯ ವಿಭಾಗದಲ್ಲಿ ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡುಕೋಣಕ್ಕೆ ಅರವಳಿಕೆ ನೀಡಲಾಗಿತ್ತು. ಆದರೆ, ಭಾರಿ ತೂಕದ ಕಾಡುಕೋಣವನ್ನು ಇಳಿಜಾರು ಪ್ರದೇಶದಿಂದ ರಸ್ತೆಗೆ ಸಾಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅದಕ್ಕೆ ಪ್ರಜ್ಞೆ ಬರುವ ಚುಚ್ಚು ಮದ್ದು ನೀಡಿ ಕಾಡಿಗೆ ಬಿಡಲಾಗಿತ್ತು. ಇದಕ್ಕೆ ಪರಿಸರಾಸಕ್ತರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶನಿವಾರ ಮತ್ತೊಂದು ಕಾಡುಕೋಣವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಮಧ್ಯಪ್ರದೇಶದ ಬಾಂಧವಗಡ ಹುಲಿ ಸಂರಕ್ಷಿತ ಪ್ರದೇಶಕ್ಕೆ ಕಳೆದ ವರ್ಷ ಜಿಲ್ಲೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಬಗ್ಗೆ ಅಧ್ಯಯನ ನಡೆಸಿತ್ತು. ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಾಲ್ ಕ್ಷೀರಸಾಗರ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡುಕೋಣಗಳ ಸೆರೆಗೆ ಆದೇಶ ನೀಡಿತ್ತು.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm