ಬ್ರೇಕಿಂಗ್ ನ್ಯೂಸ್
17-05-26 08:55 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 17: ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅವುಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಕಾಡುಕೋಣ ಸೆರೆ ಕಾರ್ಯಾಚರಣೆಯ ಕುರಿತು ಮಧ್ಯ ಪ್ರದೇಶಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದರ ಅಂಗವಾಗಿ ಸರ್ಕಾರ ಕಾಡುಕೋಣ ಸೆರೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಡೆದ ಕಾರ್ಯಾಚರಣೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು ಅದರ ಕುರಿತ ಒಂದು ವರದಿ ಇಲ್ಲಿದೆ ನೋಡಿ.
ಎರಡು ದಿನಗಳಿಂದ ಕೊಪ್ಪ ಅರಣ್ಯ ವಿಭಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಶನಿವಾರ ಆಲ್ಲೂರು ವಿಭಾಗಕ್ಕೆ ಕಾರ್ಯಾಚರಣೆ ನಡೆಸಿದರು. ಅರೆನೂರು ಸಮೀಪದ ಹಕ್ಕಿಮಕ್ಕಿ ಸಮೀಪ ಆಗಾಗ್ಗೆ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡುಕೋಣಗೆ 4 ಗಂಟೆ ಸುಮಾರಿಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು. ವೈದ್ಯರಾದ ಡಾ. ರಮೇಶ್ ತಂಡ ಹಾಗೂ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಿದರು.

ಕೊಪ್ಪ ಅರಣ್ಯ ವಿಭಾಗದಲ್ಲಿ ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡುಕೋಣಕ್ಕೆ ಅರವಳಿಕೆ ನೀಡಲಾಗಿತ್ತು. ಆದರೆ, ಭಾರಿ ತೂಕದ ಕಾಡುಕೋಣವನ್ನು ಇಳಿಜಾರು ಪ್ರದೇಶದಿಂದ ರಸ್ತೆಗೆ ಸಾಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅದಕ್ಕೆ ಪ್ರಜ್ಞೆ ಬರುವ ಚುಚ್ಚು ಮದ್ದು ನೀಡಿ ಕಾಡಿಗೆ ಬಿಡಲಾಗಿತ್ತು. ಇದಕ್ಕೆ ಪರಿಸರಾಸಕ್ತರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶನಿವಾರ ಮತ್ತೊಂದು ಕಾಡುಕೋಣವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಮಧ್ಯಪ್ರದೇಶದ ಬಾಂಧವಗಡ ಹುಲಿ ಸಂರಕ್ಷಿತ ಪ್ರದೇಶಕ್ಕೆ ಕಳೆದ ವರ್ಷ ಜಿಲ್ಲೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಬಗ್ಗೆ ಅಧ್ಯಯನ ನಡೆಸಿತ್ತು. ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಾಲ್ ಕ್ಷೀರಸಾಗರ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡುಕೋಣಗಳ ಸೆರೆಗೆ ಆದೇಶ ನೀಡಿತ್ತು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm