ಬ್ರೇಕಿಂಗ್ ನ್ಯೂಸ್
19-05-26 09:09 pm HK News Staffer ಕರ್ನಾಟಕ
ತುಮಕೂರು, ಮೇ 19: ಮೋರ್ಬಿ ಘಟನೆಯ ನಂತರ 'ಗುಜರಾತ್ ಅಭಿವೃದ್ಧಿ ಮಾದರಿ' ಟೊಳ್ಳು ಎನ್ನುವುದು ಸಾಬೀತಾಗಿದೆ. ಜನರ ಕಲ್ಯಾಣ ಆಧಾರಿತ 'ಕರ್ನಾಟಕ ಮಾದರಿ' ಉತ್ತಮವಾಗಿದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಸರ್ಕಾರವು ಮೂರು ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ವ್ಯವಸ್ಥಿತ ಸುಧಾರಣೆಗಳನ್ನು ಕೈಗೊಳ್ಳುವುದರ ಜೊತೆಗೆ 1.40 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕಲ್ಯಾಣ ಖಾತರಿಗಳನ್ನು ಜಾರಿಗೆ ತಂದಿದೆ ಎಂದರು.
ಇದೇ ವೇಳೆ, ಸಿಎಂ ಸಿದ್ದರಾಮಯ್ಯ ತುಮಕೂರು ಜಿಲ್ಲೆಯಲ್ಲಿ ರೂ. 682 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ಮಾಡಿದರು. ಹಣದುಬ್ಬರ, ನಿರುದ್ಯೋಗ ಮತ್ತು ಕೋಮು ರಾಜಕೀಯದ ಬಗ್ಗೆ ಸಿದ್ದರಾಮಯ್ಯ, ತನ್ನ ಎಂದಿನ ಶೈಲಿಯಲ್ಲಿ ಬಿಜೆಪಿ ಮತ್ತು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತಿನ ಮೋರ್ಬಿ ಜಿಲ್ಲೆಯಲ್ಲಿ 2,000 ರೂ. ಬಾಡಿಗೆ ಪಾವತಿಸಲು ವಿಫಲನಾದ ವ್ಯಕ್ತಿಯೊಬ್ಬ ಮನೆಯ ಮಾಲೀಕರು ಮತ್ತು ಆತನ ಸಹಾಯಕನಿಗೆ ತನ್ನ ಪತ್ನಿ ಮತ್ತು 13 ವರ್ಷದ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಲು ಅವಕಾಶ ಮಾಡಿಕೊಟ್ಟಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಗುಜರಾತ್ ಅಭಿವೃದ್ಧಿ ಮಾಡೆಲಿನ ಉದಾಹರಣೆ ಎಂದು ಟೀಕಿಸಿದರು.
ಮೋದಿ 2001 ರಿಂದ 2014ರ ವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆನಂತರ, 12 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ 25 ವರ್ಷಗಳಿಂದ ಗುಜರಾತ್ ಅನ್ನು ಪ್ರತಿನಿಧಿಸಿದ್ದಾರೆ. ಆದರೆ ಗುಜರಾತ್ನಲ್ಲಿ ಸಾಮಾನ್ಯ ಜನರ ಜೀವನ ಯಾವ ಸ್ಥಿತಿಗೆ ತಲುಪಿದೆ ಎಂಬುದಕ್ಕೆ ಮೋರ್ಬಿ ಘಟನೆ ಉದಾಹರಣೆ. ಈ ದೇಶದ ಆಡಳಿತವನ್ನು ನಾವು ಅನಕ್ಷರಸ್ಥ ಮತ್ತು ಕ್ರೂರ ಕೈಗಳಿಗೆ ಒಪ್ಪಿಸಿದ್ದೇವೆ ಎಂಬುದನ್ನು ಚಿಂತಿಸಿದರೆ ನಡುಕ ಉಂಟುಮಾಡುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು. ತಿಂಗಳಿಗೆ ರೂ. 2,000 ಬಾಡಿಗೆ ಪಾವತಿಸಲು ಸಾಧ್ಯವಾಗದ ಅದೇ ರಾಜ್ಯದಲ್ಲಿ ಪ್ರತಿ ಚದರ ಮೀಟರ್ಗೆ ರೂ. 1 ರಿಂದ ರೂ. 32 ರ ದರದಲ್ಲಿ ಅದಾನಿ ಗ್ರೂಪ್ ಆಫ್ ಕಂಪನಿಗಳಿಗೆ 15,946 ಎಕರೆ ಭೂಮಿಯನ್ನು ನೀಡಲಾಗಿದೆ ಎಂದು ಆರೋಪಿಸಿದರು.


2019ರಿಂದ 2023ರ ವರೆಗೆ ಕರ್ನಾಟಕವನ್ನು ಆಳಿದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡ ಸಿದ್ದರಾಮಯ್ಯ, ಬಿಜೆಪಿ ಆಡಳಿತ ಯಾವತ್ತೂ ದ್ವೇಷವನ್ನು ಹರಡುತ್ತಿದೆ ಮತ್ತು ಆರ್ಥಿಕತೆಯನ್ನು ದುರ್ಬಲಗೊಳಿಸುತ್ತಿದೆ. ಕಳೆದ ಬಾರಿ ರಾಜ್ಯದಲ್ಲಿ ಆಡಳಿತಕ್ಕೆ ಬಂದಾಗಲೂ ಇಂತಹದ್ದೇ ಸ್ಥಿತಿಯಾಗಿತ್ತು ಎಂದು ಆರೋಪಿಸಿದರು. ಇಂಧನ ಮತ್ತು ಅಡುಗೆ ಅನಿಲ ಬೆಲೆಗಳನ್ನು ಟೀಕಿಸಿದ ಸಿದ್ದರಾಮಯ್ಯ, ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಎಲ್ಪಿಜಿ ಬೆಲೆಗಳು ತೀವ್ರವಾಗಿ ಏರಿವೆ. ಕೇಂದ್ರದ ನೀತಿಗಳು ಹಣದುಬ್ಬರವನ್ನು ಇನ್ನಷ್ಟು ಹದಗೆಡಿಸಿವೆ. ಮೋದಿಯಿಂದಾಗಿ, ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಆಕಾಶವನ್ನು ಮುಟ್ಟುತ್ತಿವೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಯಾಗಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದು ನಮ್ಮ ಪಕ್ಷದ ಸಾಧನೆ. ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ, 2023ರಿಂದ ರಾಜ್ಯವು ಐದು ಖಾತರಿ ಯೋಜನೆಗಳಿಗೆ 1,40,233 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಇದರಲ್ಲಿ ಗೃಹಲಕ್ಷ್ಮಿಗೆ 75,164 ಕೋಟಿ ನೀಡಲಾಗಿದೆ. ಗೃಹ ಜ್ಯೋತಿಗೆ 30,080 ಕೋಟಿ ರೂ., ಅನ್ನ ಭಾಗ್ಯಕ್ಕೆ 19,974 ಕೋಟಿ ರೂ., ಶಕ್ತಿ ಯೋಜನೆಗೆ 14,015 ಕೋಟಿ ರೂ. ಮತ್ತು ಯುವ ನಿಧಿಗೆ 1,001 ಕೋಟಿ ರೂ. ಸೇರಿವೆ. ಈ ಯೋಜನೆಗಳಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲ, ಮಧ್ಯವರ್ತಿಗಳಿಲ್ಲ, ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ ಎಂದರು.
ರೈತ ಸಬ್ಸಿಡಿಗಳು, ಬರ ಪರಿಹಾರ, ಪ್ರವಾಹ ಪರಿಹಾರ, ಬೆಳೆ ಪರಿಹಾರ ಮತ್ತು ಸಂಬಂಧಿತ ವಲಯಗಳಿಗೆ ಸರ್ಕಾರ ಮೂರು ವರ್ಷಗಳಲ್ಲಿ ಸುಮಾರು 1 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ವಿಧವೆಯರು, ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಇತರ ಫಲಾನುಭವಿಗಳಿಗೆ ಸಾಮಾಜಿಕ ಪಿಂಚಣಿ ಯೋಜನೆಗಳು ವಾರ್ಷಿಕ 11,000 ಕೋಟಿ ರೂ.ಗಳಿಂದ 12,000 ಕೋಟಿ ರೂ.ಗಳವರೆಗೆ ಖರ್ಚು ಮಾಡಿದೆ ಎಂದು ಅಂಕಿ ಅಂಶ ಸಹಿತ ವಿವರಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm