ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm