ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm