ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm