ಬ್ರೇಕಿಂಗ್ ನ್ಯೂಸ್
12-08-20 04:57 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯೊಬ್ಬರು ಫೇಸ್ಬುಕ್ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.ಇನ್ನು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm