ಬ್ರೇಕಿಂಗ್ ನ್ಯೂಸ್
12-08-20 04:57 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯೊಬ್ಬರು ಫೇಸ್ಬುಕ್ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.ಇನ್ನು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm