ಬ್ರೇಕಿಂಗ್ ನ್ಯೂಸ್
23-05-26 10:40 pm HK News Desk ಕರ್ನಾಟಕ
ಬೆಂಗಳೂರು, ಮೇ 23: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಜೂನ್ 1 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿವೆ. ಈ ವಿಚಾರದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೆವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ ಎಂದರು.
ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಾಗಂತ, ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಿಕೊಂಡು ಬರಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.
ಪ್ರಾಥಮಿಕ ತರಗತಿಯಿಂದ 12ನೇ ತರಗತಿಯ ವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm