ಬ್ರೇಕಿಂಗ್ ನ್ಯೂಸ್
23-05-26 11:37 pm HK News Desk ಕರ್ನಾಟಕ
ಬೆಂಗಳೂರು, ಮೇ 23: ತಮಿಳುನಾಡಿನಲ್ಲಿ ಕಮಾಲ್ ಮಾಡಿರುವ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' ಪಕ್ಷವು ಕರ್ನಾಟಕ ರಾಜಕೀಯಕ್ಕೆ ಕಾಲಿಡಲು ಸಜ್ಜಾಗುತ್ತಿದೆ. ಬೆಂಗಳೂರು ಜಿಬಿಎ ಚುನಾವಣೆಯಲ್ಲಿ, ತಮಿಳು ಮತದಾರರು ಹೆಚ್ಚಿರುವ ವಾರ್ಡ್ಗಳಲ್ಲಿ ಸ್ಪರ್ಧಿಸಲು ವಿಜಯ್ ಯೋಜನೆ ರೂಪಿಸಿದ್ದಾರೆ.
'ಗ್ರೇಟರ್ ಬೆಂಗಳೂರು ಅಥಾರಿಟಿ' ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆಯೇ, ಟಿವಿಕೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ಒಟ್ಟು 369 ವಾರ್ಡ್ಗಳ ಪೈಕಿ ಕನಿಷ್ಠ 50 ವಾರ್ಡ್ಗಳ ಮೇಲೆ ಹಿಡಿತ ಸಾಧಿಸುವುದು ವಿಜಯ್ ಅಭಿಮಾನಿಗಳ ಮತ್ತು ಪಕ್ಷದ ತಂತ್ರಗಾರಿಕೆಯಾಗಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ತಮಿಳು ಭಾಷಿಕ ಮತದಾರರು ಹೆಚ್ಚಿದ್ದು ಯಾವುದೇ ಪಕ್ಷದ ಗೆಲುವಿನಲ್ಲಿ ನಿರ್ಣಾಯಕವಾಗಿದ್ದಾರೆ. ಶ್ರೀರಾಮಪುರ, ಹಲಸೂರು, ಶಿವಾಜಿನಗರ, ವಿವೇಕ್ ನಗರ, ಈಜಿಪುರ, ಮಡಿವಾಳ ಮತ್ತು ಶಾಂತಿನಗರದಂತಹ ವಾರ್ಡ್ಗಳಲ್ಲಿ ತಮಿಳು ಮತದಾರರ ಸಂಖ್ಯೆ ಹೆಚ್ಚಿದೆ. ಈ ವಾರ್ಡ್ಗಳನ್ನೇ ಗುರಿಯಾಗಿಸಿ ಟಿವಿಕೆ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಈಗಾಗಲೇ ವಿಜಯ್ ಅಭಿಮಾನಿಗಳು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ವಿಜಯ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲು ಕಾಯುತ್ತಿದ್ದಾರೆ.
ಬೆಂಗಳೂರಿನಲ್ಲಿ ದಳಪತಿ ವಿಜಯ್ಗೆ ಕೇವಲ ಸಿನಿಮಾ ಅಭಿಮಾನಿಗಳಲ್ಲದೆ, ಸಾಮಾಜಿಕವಾಗಿ ದೊಡ್ಡ ಅಭಿಮಾನಿ ಪಡೆಯೇ ಇದೆ. ವಿಜಯ್ ಸೂಚನೆಯಂತೆ ಈಗಾಗಲೇ ಹಲವು ಅಭಿಮಾನಿ ಸಂಘಗಳು ಜನಸೇವೆಯಲ್ಲಿ ತೊಡಗಿವೆ. ಅಭಿಮಾನಿಗಳನ್ನೇ ಪಕ್ಷದ ಅಭ್ಯರ್ಥಿಗಳನ್ನಾಗಿ ಮಾಡಿ, ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಂಡುಕೊಳ್ಳಲು ವಿಜಯ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm