ಬ್ರೇಕಿಂಗ್ ನ್ಯೂಸ್
23-05-26 11:37 pm HK News Desk ಕರ್ನಾಟಕ
ಬೆಂಗಳೂರು, ಮೇ 23: ತಮಿಳುನಾಡಿನಲ್ಲಿ ಕಮಾಲ್ ಮಾಡಿರುವ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' ಪಕ್ಷವು ಕರ್ನಾಟಕ ರಾಜಕೀಯಕ್ಕೆ ಕಾಲಿಡಲು ಸಜ್ಜಾಗುತ್ತಿದೆ. ಬೆಂಗಳೂರು ಜಿಬಿಎ ಚುನಾವಣೆಯಲ್ಲಿ, ತಮಿಳು ಮತದಾರರು ಹೆಚ್ಚಿರುವ ವಾರ್ಡ್ಗಳಲ್ಲಿ ಸ್ಪರ್ಧಿಸಲು ವಿಜಯ್ ಯೋಜನೆ ರೂಪಿಸಿದ್ದಾರೆ.
'ಗ್ರೇಟರ್ ಬೆಂಗಳೂರು ಅಥಾರಿಟಿ' ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆಯೇ, ಟಿವಿಕೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ಒಟ್ಟು 369 ವಾರ್ಡ್ಗಳ ಪೈಕಿ ಕನಿಷ್ಠ 50 ವಾರ್ಡ್ಗಳ ಮೇಲೆ ಹಿಡಿತ ಸಾಧಿಸುವುದು ವಿಜಯ್ ಅಭಿಮಾನಿಗಳ ಮತ್ತು ಪಕ್ಷದ ತಂತ್ರಗಾರಿಕೆಯಾಗಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ತಮಿಳು ಭಾಷಿಕ ಮತದಾರರು ಹೆಚ್ಚಿದ್ದು ಯಾವುದೇ ಪಕ್ಷದ ಗೆಲುವಿನಲ್ಲಿ ನಿರ್ಣಾಯಕವಾಗಿದ್ದಾರೆ. ಶ್ರೀರಾಮಪುರ, ಹಲಸೂರು, ಶಿವಾಜಿನಗರ, ವಿವೇಕ್ ನಗರ, ಈಜಿಪುರ, ಮಡಿವಾಳ ಮತ್ತು ಶಾಂತಿನಗರದಂತಹ ವಾರ್ಡ್ಗಳಲ್ಲಿ ತಮಿಳು ಮತದಾರರ ಸಂಖ್ಯೆ ಹೆಚ್ಚಿದೆ. ಈ ವಾರ್ಡ್ಗಳನ್ನೇ ಗುರಿಯಾಗಿಸಿ ಟಿವಿಕೆ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಈಗಾಗಲೇ ವಿಜಯ್ ಅಭಿಮಾನಿಗಳು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ವಿಜಯ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲು ಕಾಯುತ್ತಿದ್ದಾರೆ.
ಬೆಂಗಳೂರಿನಲ್ಲಿ ದಳಪತಿ ವಿಜಯ್ಗೆ ಕೇವಲ ಸಿನಿಮಾ ಅಭಿಮಾನಿಗಳಲ್ಲದೆ, ಸಾಮಾಜಿಕವಾಗಿ ದೊಡ್ಡ ಅಭಿಮಾನಿ ಪಡೆಯೇ ಇದೆ. ವಿಜಯ್ ಸೂಚನೆಯಂತೆ ಈಗಾಗಲೇ ಹಲವು ಅಭಿಮಾನಿ ಸಂಘಗಳು ಜನಸೇವೆಯಲ್ಲಿ ತೊಡಗಿವೆ. ಅಭಿಮಾನಿಗಳನ್ನೇ ಪಕ್ಷದ ಅಭ್ಯರ್ಥಿಗಳನ್ನಾಗಿ ಮಾಡಿ, ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಂಡುಕೊಳ್ಳಲು ವಿಜಯ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm