ಬ್ರೇಕಿಂಗ್ ನ್ಯೂಸ್
23-05-26 11:37 pm HK News Desk ಕರ್ನಾಟಕ
ಬೆಂಗಳೂರು, ಮೇ 23: ತಮಿಳುನಾಡಿನಲ್ಲಿ ಕಮಾಲ್ ಮಾಡಿರುವ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' ಪಕ್ಷವು ಕರ್ನಾಟಕ ರಾಜಕೀಯಕ್ಕೆ ಕಾಲಿಡಲು ಸಜ್ಜಾಗುತ್ತಿದೆ. ಬೆಂಗಳೂರು ಜಿಬಿಎ ಚುನಾವಣೆಯಲ್ಲಿ, ತಮಿಳು ಮತದಾರರು ಹೆಚ್ಚಿರುವ ವಾರ್ಡ್ಗಳಲ್ಲಿ ಸ್ಪರ್ಧಿಸಲು ವಿಜಯ್ ಯೋಜನೆ ರೂಪಿಸಿದ್ದಾರೆ.
'ಗ್ರೇಟರ್ ಬೆಂಗಳೂರು ಅಥಾರಿಟಿ' ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆಯೇ, ಟಿವಿಕೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ಒಟ್ಟು 369 ವಾರ್ಡ್ಗಳ ಪೈಕಿ ಕನಿಷ್ಠ 50 ವಾರ್ಡ್ಗಳ ಮೇಲೆ ಹಿಡಿತ ಸಾಧಿಸುವುದು ವಿಜಯ್ ಅಭಿಮಾನಿಗಳ ಮತ್ತು ಪಕ್ಷದ ತಂತ್ರಗಾರಿಕೆಯಾಗಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ತಮಿಳು ಭಾಷಿಕ ಮತದಾರರು ಹೆಚ್ಚಿದ್ದು ಯಾವುದೇ ಪಕ್ಷದ ಗೆಲುವಿನಲ್ಲಿ ನಿರ್ಣಾಯಕವಾಗಿದ್ದಾರೆ. ಶ್ರೀರಾಮಪುರ, ಹಲಸೂರು, ಶಿವಾಜಿನಗರ, ವಿವೇಕ್ ನಗರ, ಈಜಿಪುರ, ಮಡಿವಾಳ ಮತ್ತು ಶಾಂತಿನಗರದಂತಹ ವಾರ್ಡ್ಗಳಲ್ಲಿ ತಮಿಳು ಮತದಾರರ ಸಂಖ್ಯೆ ಹೆಚ್ಚಿದೆ. ಈ ವಾರ್ಡ್ಗಳನ್ನೇ ಗುರಿಯಾಗಿಸಿ ಟಿವಿಕೆ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಈಗಾಗಲೇ ವಿಜಯ್ ಅಭಿಮಾನಿಗಳು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ವಿಜಯ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲು ಕಾಯುತ್ತಿದ್ದಾರೆ.
ಬೆಂಗಳೂರಿನಲ್ಲಿ ದಳಪತಿ ವಿಜಯ್ಗೆ ಕೇವಲ ಸಿನಿಮಾ ಅಭಿಮಾನಿಗಳಲ್ಲದೆ, ಸಾಮಾಜಿಕವಾಗಿ ದೊಡ್ಡ ಅಭಿಮಾನಿ ಪಡೆಯೇ ಇದೆ. ವಿಜಯ್ ಸೂಚನೆಯಂತೆ ಈಗಾಗಲೇ ಹಲವು ಅಭಿಮಾನಿ ಸಂಘಗಳು ಜನಸೇವೆಯಲ್ಲಿ ತೊಡಗಿವೆ. ಅಭಿಮಾನಿಗಳನ್ನೇ ಪಕ್ಷದ ಅಭ್ಯರ್ಥಿಗಳನ್ನಾಗಿ ಮಾಡಿ, ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಂಡುಕೊಳ್ಳಲು ವಿಜಯ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm