ಬ್ರೇಕಿಂಗ್ ನ್ಯೂಸ್
25-05-26 09:38 pm HK News Staffer ಕರ್ನಾಟಕ
ಬೆಂಗಳೂರು, ಮೇ 25: ರಾಜ್ಯ ಬಿಜೆಪಿ ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಇತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಿನ ಬಾರಿಯೂ ಕಾಂಗ್ರೆಸಿನದ್ದೇ ಸರ್ಕಾರ ಎನ್ನುವ ಮೂಲಕ ಪ್ರತಿಪಕ್ಷಗಳಿಗೆ ಸಂದೇಶ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂದೇ ಪೇಪರ್ನಲ್ಲಿ ಬರೆದಿಟ್ಕೊಳಿ ಮುಂದಿನ ಬಾರಿಯೂ ನಮ್ದೇ ಸರ್ಕಾರ. 'ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ' ಇರುತ್ತದೆ ಎಂದು ಖಡಕ್ಕಾಗಿ ಹೇಳಿದ್ದಾರೆ.
''ಪೇಪರ್ನಲ್ಲಿ ಬರೆದಿಟ್ಕೊಳಿ, ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ'' ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
2023ರಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿಗೆ 122 ಸೀಟು ಬರುತ್ತೆ ಎಂದಿದ್ದರು. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು, ಬರೆದಿಟ್ಟುಕೊಳ್ಳಿ 136 ಸೀಟುಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದಿದ್ದರು. ಈ ಭವಿಷ್ಯ ನಿಜವಾಗಿತ್ತು. ಇದೀಗ ಮತ್ತೊಂದು ಭವಿಷ್ಯ ನುಡಿದಿರುವ ಡಿಕೆಶಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಆದಾಗ್ಯೂ, ಸಿಎಂ ಆಗುವ ಕುರಿತ ಪ್ರಶ್ನೆಗೆ ಉತ್ತರಿಸದೆ ಮೌನವಾದ ಡಿಸಿಎಂ, ದೇಶದಲ್ಲಿನ ದರ ಏರಿಕೆ ಕುರಿತು ಉಲ್ಲೇಖಿಸಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಬಗ್ಗೆ ಮೇ 30ಕ್ಕೆ ಪ್ರತಿಭಟನೆ ನಡೆಸ್ತೀವಿ ಎಂದರು. ಇದೇ ಸಂದರ್ಭದಲ್ಲಿ ದೆಹಲಿಗೆ ಹೋಗುತ್ತಿದ್ದೀರಾ? ಎಂಬ ಪ್ರಶ್ನೆಗೆ, ಹೈಕಮಾಂಡ್ ನಾಯಕರು ಕರೆದರೆ ಮಾತ್ರ ಹೋಗುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm