ಬ್ರೇಕಿಂಗ್ ನ್ಯೂಸ್
25-05-26 09:38 pm HK News Staffer ಕರ್ನಾಟಕ
ಬೆಂಗಳೂರು, ಮೇ 25: ರಾಜ್ಯ ಬಿಜೆಪಿ ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಇತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಿನ ಬಾರಿಯೂ ಕಾಂಗ್ರೆಸಿನದ್ದೇ ಸರ್ಕಾರ ಎನ್ನುವ ಮೂಲಕ ಪ್ರತಿಪಕ್ಷಗಳಿಗೆ ಸಂದೇಶ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂದೇ ಪೇಪರ್ನಲ್ಲಿ ಬರೆದಿಟ್ಕೊಳಿ ಮುಂದಿನ ಬಾರಿಯೂ ನಮ್ದೇ ಸರ್ಕಾರ. 'ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ' ಇರುತ್ತದೆ ಎಂದು ಖಡಕ್ಕಾಗಿ ಹೇಳಿದ್ದಾರೆ.
''ಪೇಪರ್ನಲ್ಲಿ ಬರೆದಿಟ್ಕೊಳಿ, ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ'' ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
2023ರಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿಗೆ 122 ಸೀಟು ಬರುತ್ತೆ ಎಂದಿದ್ದರು. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು, ಬರೆದಿಟ್ಟುಕೊಳ್ಳಿ 136 ಸೀಟುಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದಿದ್ದರು. ಈ ಭವಿಷ್ಯ ನಿಜವಾಗಿತ್ತು. ಇದೀಗ ಮತ್ತೊಂದು ಭವಿಷ್ಯ ನುಡಿದಿರುವ ಡಿಕೆಶಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಆದಾಗ್ಯೂ, ಸಿಎಂ ಆಗುವ ಕುರಿತ ಪ್ರಶ್ನೆಗೆ ಉತ್ತರಿಸದೆ ಮೌನವಾದ ಡಿಸಿಎಂ, ದೇಶದಲ್ಲಿನ ದರ ಏರಿಕೆ ಕುರಿತು ಉಲ್ಲೇಖಿಸಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಬಗ್ಗೆ ಮೇ 30ಕ್ಕೆ ಪ್ರತಿಭಟನೆ ನಡೆಸ್ತೀವಿ ಎಂದರು. ಇದೇ ಸಂದರ್ಭದಲ್ಲಿ ದೆಹಲಿಗೆ ಹೋಗುತ್ತಿದ್ದೀರಾ? ಎಂಬ ಪ್ರಶ್ನೆಗೆ, ಹೈಕಮಾಂಡ್ ನಾಯಕರು ಕರೆದರೆ ಮಾತ್ರ ಹೋಗುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm