ಬ್ರೇಕಿಂಗ್ ನ್ಯೂಸ್
26-05-26 08:51 pm HK News Staffer ಕರ್ನಾಟಕ
ಮೈಸೂರು, ಮೇ 25: ‘ಕಾಂತಾರ’ ಚಿತ್ರದ ಚಾವುಂಡಿ ದೈವದ ಪಾತ್ರದ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಯಾರಿಗೂ ತಿಳಿಯದಂತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ರಣವೀರ್ ಸಿಂಗ್ ವಿಶೇಷ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿ ಎದುರು ತಲೆಬಾಗಿ ಪ್ರಾರ್ಥನೆ ಸಲ್ಲಿಸಿರುವ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ. ದೇವಾಲಯದಲ್ಲಿ ಅವರು ಮೌನವಾಗಿ ಕುಳಿತು ಕ್ಷಮೆ ಕೇಳಿದ ಕ್ಷಣಗಳು ಸಾರ್ವಜನಿಕರ ಗಮನ ಸೆಳೆದಿವೆ.
ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ರಣವೀರ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಈಗಾಗಲೇ ಕ್ಷಮೆ ಯಾಚಿಸಿದ್ದರು. ಜೊತೆಗೆ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ತಿಳಿಸಿದ್ದರು. ಇದೀಗ ಅವರು ಹೇಳಿದಂತೆ ನಡೆದುಕೋಂಡಿದ್ದಾರೆ.
ಘಟನೆ ಹಿನ್ನೆಲೆ:
ಗೋವಾದಲ್ಲಿ ನಡೆದ ಫಿಲ್ಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಎದುರೇ ಮಾತನಾಡಿದ್ದ ರಣವೀರ್ ಸಿಂಗ್, ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ವೇಳೆ ದೈವದ ಪಾತ್ರವನ್ನು ಅನುಕರಿಸಿ ಮಾತನಾಡಿದ್ದರು. “ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯ ಅದ್ಭುತವಾಗಿತ್ತು” ಎಂದು ಹೇಳಿ, ಆ ಪಾತ್ರದ ಭಾವಭಂಗಿಯನ್ನು ಮಿಮಿಕ್ರಿ ಮಾಡಿದ್ದರು.
ರಣವೀರ್ ಸಿಂಗ್ ಅವರ ಈ ನಡೆಗೆ ಕರಾವಳಿ ಭಾಗದ ದೈವಾರಾಧಕರು ಹಾಗೂ ಹಲವಾರು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದಡಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಬೆಳವಣಿಗೆಯ ಬಳಿಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನಟ ಕ್ಷಮೆಯಾಚಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm