ಬ್ರೇಕಿಂಗ್ ನ್ಯೂಸ್
26-05-26 08:51 pm HK News Staffer ಕರ್ನಾಟಕ
ಮೈಸೂರು, ಮೇ 25: ‘ಕಾಂತಾರ’ ಚಿತ್ರದ ಚಾವುಂಡಿ ದೈವದ ಪಾತ್ರದ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಯಾರಿಗೂ ತಿಳಿಯದಂತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ರಣವೀರ್ ಸಿಂಗ್ ವಿಶೇಷ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿ ಎದುರು ತಲೆಬಾಗಿ ಪ್ರಾರ್ಥನೆ ಸಲ್ಲಿಸಿರುವ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ. ದೇವಾಲಯದಲ್ಲಿ ಅವರು ಮೌನವಾಗಿ ಕುಳಿತು ಕ್ಷಮೆ ಕೇಳಿದ ಕ್ಷಣಗಳು ಸಾರ್ವಜನಿಕರ ಗಮನ ಸೆಳೆದಿವೆ.
ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ರಣವೀರ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಈಗಾಗಲೇ ಕ್ಷಮೆ ಯಾಚಿಸಿದ್ದರು. ಜೊತೆಗೆ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ತಿಳಿಸಿದ್ದರು. ಇದೀಗ ಅವರು ಹೇಳಿದಂತೆ ನಡೆದುಕೋಂಡಿದ್ದಾರೆ.
ಘಟನೆ ಹಿನ್ನೆಲೆ:
ಗೋವಾದಲ್ಲಿ ನಡೆದ ಫಿಲ್ಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಎದುರೇ ಮಾತನಾಡಿದ್ದ ರಣವೀರ್ ಸಿಂಗ್, ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ವೇಳೆ ದೈವದ ಪಾತ್ರವನ್ನು ಅನುಕರಿಸಿ ಮಾತನಾಡಿದ್ದರು. “ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯ ಅದ್ಭುತವಾಗಿತ್ತು” ಎಂದು ಹೇಳಿ, ಆ ಪಾತ್ರದ ಭಾವಭಂಗಿಯನ್ನು ಮಿಮಿಕ್ರಿ ಮಾಡಿದ್ದರು.
ರಣವೀರ್ ಸಿಂಗ್ ಅವರ ಈ ನಡೆಗೆ ಕರಾವಳಿ ಭಾಗದ ದೈವಾರಾಧಕರು ಹಾಗೂ ಹಲವಾರು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದಡಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಬೆಳವಣಿಗೆಯ ಬಳಿಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನಟ ಕ್ಷಮೆಯಾಚಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm