ಬ್ರೇಕಿಂಗ್ ನ್ಯೂಸ್
27-05-26 06:26 pm HK News Staffer ಕರ್ನಾಟಕ
ಬೆಂಗಳೂರು, ಮೇ 27: ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಇದೀಗ ಬಹುತೇಕ ಅಧಿಕೃತ ಸ್ವರೂಪ ಪಡೆದಂತಾಗಿದೆ. ಇದರ ನಡುವೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸ್ಫೋಟ ಸೃಷ್ಟಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ವಿ. ದೇಶಪಾಂಡೆ, “ಸಿದ್ದರಾಮಯ್ಯ ಅವರು ದೆಹಲಿಯಿಂದ ಹಿಂದಿರುಗುವಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿಕೊಂಡು ಬಂದಿದ್ದಾರೆ” ಎಂದು ಬಹಿರಂಗಪಡಿಸಿದರು.
“ಮುಖ್ಯಮಂತ್ರಿಯವರು ನಮ್ಮನ್ನು ಭೇಟಿ ಮಾಡಿದ ವೇಳೆ ‘ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ನಾಳೆಯೇ ರಾಜೀನಾಮೆ ನೀಡುತ್ತೇವೆ ಎಂದೂ ಹೇಳಿದ್ದಾರೆ. ಆದರೆ, ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬೇಡಿ ಎಂದು ಬಲವಾಗಿ ಮನವಿ ಮಾಡಿದ್ದೇವೆ,” ಎಂದು ದೇಶಪಾಂಡೆ ತಿಳಿಸಿದ್ದಾರೆ.
ಇದುವರೆಗೆ ರಾಜಕೀಯ ವಲಯದಲ್ಲಿ ಊಹಾಪೋಹವಾಗಿ ಹರಿದಾಡುತ್ತಿದ್ದ ಸುದ್ದಿಗೆ ದೇಶಪಾಂಡೆ ಅವರ ಹೇಳಿಕೆ ಹೊಸ ತಿರುವು ನೀಡಿದ್ದು, ಸಿಎಂ ರಾಜೀನಾಮೆ ಈಗ ಕ್ಷಣಗಣನೆಯ ವಿಷಯ ಎಂಬ ಚರ್ಚೆ ಮತ್ತಷ್ಟು ಗಟ್ಟಿಯಾಗಿದೆ. ಇನ್ನೊಂದೆಡೆ, ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೂಡ ಆತಂಕ ವ್ಯಕ್ತಪಡಿಸಿದ್ದಾರೆ.
“ಕಳೆದ ಕೆಲವು ಗಂಟೆಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ರಾಜೀನಾಮೆ ಸುದ್ದಿಗಳು ನಮ್ಮಲ್ಲೂ ಕಳವಳ ಮೂಡಿಸಿವೆ. ಅದಕ್ಕಾಗಿ ನಾವು ಸಿಎಂ ಅವರನ್ನು ಭೇಟಿ ಮಾಡಿ, ರಾಜೀನಾಮೆ ನೀಡದಂತೆ ಮನವಿ ಮಾಡಿದ್ದೇವೆ. ಆದರೆ, ನಮ್ಮ ಮಾತುಗಳನ್ನೆಲ್ಲ ಕೇಳಿಸಿಕೊಂಡ ಸಿದ್ದರಾಮಯ್ಯ ಅವರು ಸಂಪೂರ್ಣ ಮೌನವಾಗಿದ್ದರು. ಒಂದು ಮಾತನ್ನೂ ಆಡಲಿಲ್ಲ,” ಎಂದು ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಸಿಎಂ ಅವರ ಈ ನಿಗೂಢ ಮೌನವೇ ಇದೀಗ ಕಾಂಗ್ರೆಸ್ ವಲಯದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ್ದು, ಹೈಕಮಾಂಡ್ ಸೂಚನೆಗೆ ಸಿದ್ದರಾಮಯ್ಯ ತಲೆಬಾಗಿರುವ ಸಾಧ್ಯತೆಗಳು ಬಲವಾಗಿವೆ. ನಾಳೆ ಬೆಳಗ್ಗೆ ನಡೆಯಲಿರುವ ಜಂಟಿ ಸುದ್ದಿಗೋಷ್ಠಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ವೇಗವಾಗಿ ಹರಿದಾಡುತ್ತಿದೆ.
ಒಟ್ಟಾರೆ, ಕಾಂಗ್ರೆಸ್ ಒಳಗಿನ ವೇಗವಾದ ರಾಜಕೀಯ ಬೆಳವಣಿಗೆಗಳು, ಸಚಿವರ ಸರಣಿ ಭೇಟಿ, ಹಿರಿಯ ನಾಯಕರ ಭಾವನಾತ್ಮಕ ಮನವಿಗಳು ಹಾಗೂ ಸಿಎಂ ಅವರ ಮೌನ — ಇವೆಲ್ಲವೂ ಕರ್ನಾಟಕದಲ್ಲಿ ದೊಡ್ಡ ನಾಯಕತ್ವ ಬದಲಾವಣೆಯ ಸೂಚನೆ ನೀಡುತ್ತಿರುವಂತಿದೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm