ಬ್ರೇಕಿಂಗ್ ನ್ಯೂಸ್
28-05-26 03:24 pm HK News Staffer ಕರ್ನಾಟಕ
ಬೆಂಗಳೂರು, ಮೇ 28 : ರಾಜ್ಯ ರಾಜಕಾರಣದಲ್ಲಿ ಹಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಅಧಿಕೃತ ತೆರೆಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗಿಳಿದಿದ್ದಾರೆ.
ರಾಜೀನಾಮೆಗೂ ಮುನ್ನ ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಜೊತೆಗೆ ಕೊನೆಯ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯಿತು. ಸದಾ ರಾಜಕೀಯ ಚಟುವಟಿಕೆ, ಜನಸಾಗರ ಮತ್ತು ಅಧಿಕಾರದ ಗಿಜಿಗುಡುವಿಕೆಯಿಂದ ಕಂಗೊಳಿಸುತ್ತಿದ್ದ ಕಾವೇರಿ ನಿವಾಸದಲ್ಲಿ ಇಂದು ಭಾವುಕ ಮೌನ ಆವರಿಸಿತ್ತು.
ಸಭೆಯಲ್ಲಿ ಭಾಗಿಯಾಗಿದ್ದ ಸಚಿವರು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ದೀರ್ಘ ರಾಜಕೀಯ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಈ ವೇಳೆ ಸಹೋದ್ಯೋಗಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ಮಧ್ಯಾಹ್ನ ಭೋಜನದ ಬಳಿಕ ರಾಜೀನಾಮೆ ಪತ್ರದೊಂದಿಗೆ ಲೋಕಭವನದತ್ತ ಹೆಜ್ಜೆ ಹಾಕಿದರು.

ರಾಜ್ಯಪಾಲರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸಂವಿಧಾನಾತ್ಮಕ ಪ್ರಕ್ರಿಯೆ ಪ್ರಕಾರ ರಾಜ್ಯಪಾಲರು ಅಧಿಕೃತವಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದ್ದು, ಬಳಿಕ ರಾಜೀನಾಮೆ ಅಂಗೀಕಾರದ ಅಂತಿಮ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.
ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಪಯಣದಲ್ಲಿ ದಣಿವರಿಯದ ಹೋರಾಟಗಾರನಾಗಿ ಹೊರಹೊಮ್ಮಿದ್ದ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ ಅವರು ರಾಜೀನಾಮೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ದಾರಿ ಮಾಡಿಕೊಟ್ಟಿದೆ.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm