ಬ್ರೇಕಿಂಗ್ ನ್ಯೂಸ್
28-05-26 05:31 pm HK News Desk ಕರ್ನಾಟಕ
ಬೆಂಗಳೂರು, ಮೇ 28: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿ ಇಂದು ಭಾವುಕ ಕ್ಷಣದ ಸಾಕ್ಷಿತಾಯಿತು. ಗುರುವಾರ ಬೆಳಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಹಮ್ಮಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಕಾವೇರಿ ನಿವಾಸದ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾವೇರಿ ಹೊರಗಡೆ ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕಾವೇರಿಗೆ ಬಂದ ಬಹುತೇಕ ಅಭಿಮಾನಿಗಳ ಪೈಕಿ ವರುಣಾ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಡವರಿಗೆ ಅನ್ನ ಕೊಟ್ಟ ಸಿದ್ದರಾಮಯ್ಯ ಎಂಬ ಘೋಷಣೆಗಳು ಇದೇ ವೇಳೆ ಮೊಳಗಿದವು.
ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಸಿಎಂ ನಿವಾಸ ಕಾವೇರಿಯಲ್ಲಿ ವರುಣಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದರು. ಸಿಎಂ ರಾಜೀನಾಮೆ ಸುದ್ದಿ ಕೇಳಿ ಆಗಮಿಸಿರೋ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸಮಾಧಾನ ಪಡಿಸಿದರು. ಈ ವೇಳೆ ಕಾರ್ಯಕರ್ತರನ್ನು ನೋಡಿ ಸಿದ್ದರಾಮಯ್ಯ ಭಾವುಕರಾದರು.
ಸಿಎಂ ರಾಜೀನಾಮೆಗೆ ಹಿನ್ನೆಲೆಯಲ್ಲಿ ಅವರ ಪರವಾಗಿ ಘೋಷಣೆ ಕೂಗುತ್ತಾ ಕಾರ್ಯಕರ್ತರು ಕಣ್ಣೀರು ಹಾಕಿದರು. ಈ ವೇಳೆ ಎಲ್ಲರಿಗೂ ಹಸ್ತಲಾಘವ ಮಾಡಿದ ಸಿದ್ದರಾಮಯ್ಯ ಭಾವುಕರಾಗಿ ಬೀಳ್ಕೊಟ್ಟರು.
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಕೇಳಿ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm