ಬ್ರೇಕಿಂಗ್ ನ್ಯೂಸ್
29-05-26 10:29 am HK News Staffer ಕರ್ನಾಟಕ
ಬೆಂಗಳೂರು, ಮೇ 29: ಕರ್ನಾಟಕ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಸಂವಿಧಾನಬದ್ಧ ಚಾಲನೆ ದೊರೆತಿದ್ದು, ಹೊಸ ಸರ್ಕಾರ ರಚನೆಗೆ ವೇಗ ಸಿಕ್ಕಿದೆ.
ಲೋಕಭವನದಿಂದ ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಿಸಿದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಸಿದ್ದರಾಮಯ್ಯ ಅವರು ಇನ್ನೂ ಎರಡು-ಮೂರು ದಿನಗಳ ಕಾಲ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಗುರುವಾರ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದ್ದರು. ಕಾರ್ಯದರ್ಶಿಗಳು ಪತ್ರವನ್ನು ಸ್ವೀಕರಿಸಿದ್ದರೂ, ಸಂವಿಧಾನದ ಪ್ರಕಾರ ರಾಜ್ಯಪಾಲರ ಸಹಿ ಅಗತ್ಯವಾಗಿತ್ತು. ಇಂದೋರ್ನಿಂದ ಬೆಂಗಳೂರಿಗೆ ಮರಳಿದ ರಾಜ್ಯಪಾಲರು ಶುಕ್ರವಾರ ಬೆಳಗ್ಗೆ ರಾಜೀನಾಮೆ ಪತ್ರಕ್ಕೆ ಅಧಿಕೃತ ಅಂಗೀಕಾರ ನೀಡಿರುವುದಾಗಿ ತಿಳಿದುಬಂದಿದೆ.
ಇದೀಗ ಕಾಂಗ್ರೆಸ್ನಲ್ಲಿ ನಾಯಕತ್ವ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಪಕ್ಷದ ಮೂಲಗಳ ಪ್ರಕಾರ, ಎಲ್ಲವೂ ಯೋಜನೆಯಂತೆ ನಡೆದರೆ ಸೋಮವಾರ ಸಂಜೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ಆರಂಭಗೊಂಡಿವೆ.
ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರದೊಂದಿಗೆ ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಕಾಂಗ್ರೆಸ್ನ ಮುಂದಿನ ನಾಯಕತ್ವದತ್ತ ಎಲ್ಲರ ಚಿತ್ತ ನೆಟ್ಟಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿರುವ ಹಿನ್ನೆಲೆ, ರಾಜ್ಯದ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm