ಬ್ರೇಕಿಂಗ್ ನ್ಯೂಸ್
29-05-26 04:30 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಹಿರಿಯ ನಾಯಕರು ತೆರೆಮರೆಯಲ್ಲಿ ಇದಕ್ಕಾಗಿ ಲಾಬಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಸದ್ಯ ಚರ್ಚೆಯಲ್ಲಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಿ.ಪರಮೇಶ್ವರ, ಈಶ್ವರ ಖಂಡ್ರೆ ಹಾಗೂ ರಾಮಲಿಂಗಾ ರೆಡ್ಡಿ ಹೆಸರುಗಳು ಚರ್ಚೆಯಲ್ಲಿದ್ದರೂ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೆಸರೇ ಹೆಚ್ಚು ಚಾಲ್ತಿಯಲ್ಲುದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವಿ ಅಹಿಂದ ನಾಯಕನಾಗಿರುವ ಜಾರಕಿಹೊಳಿ ಪಕ್ಷದಲ್ಲಿ ತನ್ನದೇ ವರ್ಚಸ್ಸು ಮತ್ತು ಸಿದ್ದರಾಮಯ್ಯ ಅವರ ಅಹಿಂದ ಉತ್ತರಾಧಿಕಾರಿ ಎನ್ನುವ ಹೆಗ್ಗಳಿಕೆ ಹೊಂದಿದ್ದಾರೆ. ಅವರನ್ನು ಪಕ್ಷದ ಸಾರಥಿಯನ್ನಾಗಿಸಲು ಹೈಕಮಾಂಡ್ ನಾಯಕರು ಕೂಡ ಆಸಕ್ತಿ ತೋರಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ಹೊಸ ಗೊಂದಲವೂ ಮೂಡಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಚಿವ ಸ್ಥಾನ ತ್ಯಜಿಸಬೇಕು ಎಂಬ ಹೈಕಮಾಂಡ್ ಸೂಚನೆ, ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಜಾರಿಗೊಳಿಸಲು ಮುಂದಾಗಿರುವುದಕ್ಕೆ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಚುನಾವಣೆಯ ಬಳಿಕ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿದಿದ್ದರು. ಜಾರಕಿಹೊಳಿ ಬೆಂಬಲಿಗರು ಇದನ್ನೇ ಮುಂದಿಟ್ಟಿದ್ದು ಅಸಮಾನತೆಯ ಪ್ರಶ್ನೆ ಎಬ್ಬಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ‘ಒಬ್ಬರಿಗೆ ಒಂದು ಹುದ್ದೆ’ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬಯಸುತ್ತಿದೆ ಎನ್ನಲಾಗಿದೆ. ಅಧಿಕಾರ ಮತ್ತು ಸಂಘಟನಾ ನಿಯಂತ್ರಣ ಒಬ್ಬರ ಕೈಯಲ್ಲಿ ಇರಬಾರದು ಎಂಬ ಅಭಿಪ್ರಾಯ ಹೈಕಮಾಂಡ್ನಲ್ಲಿ ಬಲವಾಗುತ್ತಿದೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm