ಬ್ರೇಕಿಂಗ್ ನ್ಯೂಸ್
29-05-26 04:30 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಹಿರಿಯ ನಾಯಕರು ತೆರೆಮರೆಯಲ್ಲಿ ಇದಕ್ಕಾಗಿ ಲಾಬಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಸದ್ಯ ಚರ್ಚೆಯಲ್ಲಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಿ.ಪರಮೇಶ್ವರ, ಈಶ್ವರ ಖಂಡ್ರೆ ಹಾಗೂ ರಾಮಲಿಂಗಾ ರೆಡ್ಡಿ ಹೆಸರುಗಳು ಚರ್ಚೆಯಲ್ಲಿದ್ದರೂ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೆಸರೇ ಹೆಚ್ಚು ಚಾಲ್ತಿಯಲ್ಲುದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವಿ ಅಹಿಂದ ನಾಯಕನಾಗಿರುವ ಜಾರಕಿಹೊಳಿ ಪಕ್ಷದಲ್ಲಿ ತನ್ನದೇ ವರ್ಚಸ್ಸು ಮತ್ತು ಸಿದ್ದರಾಮಯ್ಯ ಅವರ ಅಹಿಂದ ಉತ್ತರಾಧಿಕಾರಿ ಎನ್ನುವ ಹೆಗ್ಗಳಿಕೆ ಹೊಂದಿದ್ದಾರೆ. ಅವರನ್ನು ಪಕ್ಷದ ಸಾರಥಿಯನ್ನಾಗಿಸಲು ಹೈಕಮಾಂಡ್ ನಾಯಕರು ಕೂಡ ಆಸಕ್ತಿ ತೋರಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ಹೊಸ ಗೊಂದಲವೂ ಮೂಡಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಚಿವ ಸ್ಥಾನ ತ್ಯಜಿಸಬೇಕು ಎಂಬ ಹೈಕಮಾಂಡ್ ಸೂಚನೆ, ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಜಾರಿಗೊಳಿಸಲು ಮುಂದಾಗಿರುವುದಕ್ಕೆ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಚುನಾವಣೆಯ ಬಳಿಕ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿದಿದ್ದರು. ಜಾರಕಿಹೊಳಿ ಬೆಂಬಲಿಗರು ಇದನ್ನೇ ಮುಂದಿಟ್ಟಿದ್ದು ಅಸಮಾನತೆಯ ಪ್ರಶ್ನೆ ಎಬ್ಬಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ‘ಒಬ್ಬರಿಗೆ ಒಂದು ಹುದ್ದೆ’ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬಯಸುತ್ತಿದೆ ಎನ್ನಲಾಗಿದೆ. ಅಧಿಕಾರ ಮತ್ತು ಸಂಘಟನಾ ನಿಯಂತ್ರಣ ಒಬ್ಬರ ಕೈಯಲ್ಲಿ ಇರಬಾರದು ಎಂಬ ಅಭಿಪ್ರಾಯ ಹೈಕಮಾಂಡ್ನಲ್ಲಿ ಬಲವಾಗುತ್ತಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm