ಬ್ರೇಕಿಂಗ್ ನ್ಯೂಸ್
29-05-26 10:41 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ರಾಜಕೀಯದ ಗಮನ ಈಗ ನೂತನ ಮುಖ್ಯಮಂತ್ರಿ ಆಯ್ಕೆಯತ್ತ ಕೇಂದ್ರೀಕೃತವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ.
ಮೂಲಗಳ ಪ್ರಕಾರ, ಸೋಮವಾರ ಗೋಧೂಳಿ ಮುಹೂರ್ತದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಸಮಾರಂಭಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳು ವೇಗ ಪಡೆದುಕೊಂಡಿವೆ.
ಪ್ರಮಾಣವಚನ ಸಮಾರಂಭದ ಕುರಿತು ಕಾಂಗ್ರೆಸ್ ಒಳವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಡಿಕೆಶಿ ಆರಂಭಿಕ ಹಂತದಲ್ಲಿ ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಆದರೆ ಉಪ ಮುಖ್ಯಮಂತ್ರಿ ಸೇರಿದಂತೆ ಕನಿಷ್ಠ 8 ಮಂದಿ ಸಚಿವರು ಕೂಡ ಮೊದಲ ಹಂತದಲ್ಲೇ ಪ್ರಮಾಣವಚನ ಸ್ವೀಕರಿಸಬೇಕು ಎಂಬ ಒತ್ತಡವನ್ನು ಪಕ್ಷದ ಹಿರಿಯ ನಾಯಕರು ಹೇರಿದ್ದಾರೆ. ಈ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್, ವಿಶೇಷವಾಗಿ ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿ ಹೆಸರನ್ನು ಪ್ರಸ್ತಾಪಿಸಲಿದ್ದು, ಕೇಂದ್ರ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅನುಮೋದನೆ ನೀಡಲಿದ್ದಾರೆ ಎನ್ನಲಾಗಿದೆ.
ಅದಾದ ಬಳಿಕ ಡಿಕೆಶಿ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೂರು ದಿನಗಳಿಂದ ರಾಜಕೀಯ ಬೆಳವಣಿಗೆಗಳ ಕುರಿತು ಮೌನ ವಹಿಸಿದ್ದ ಡಿ.ಕೆ. ಶಿವಕುಮಾರ್, ಇದೀಗ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಸಿಎಲ್ಪಿ ಸಭೆಯ ಬಗ್ಗೆ ಮಾಹಿತಿ ನೀಡಿರುವುದು ರಾಜಕೀಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm