ಬ್ರೇಕಿಂಗ್ ನ್ಯೂಸ್
29-05-26 10:41 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ರಾಜಕೀಯದ ಗಮನ ಈಗ ನೂತನ ಮುಖ್ಯಮಂತ್ರಿ ಆಯ್ಕೆಯತ್ತ ಕೇಂದ್ರೀಕೃತವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ.
ಮೂಲಗಳ ಪ್ರಕಾರ, ಸೋಮವಾರ ಗೋಧೂಳಿ ಮುಹೂರ್ತದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಸಮಾರಂಭಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳು ವೇಗ ಪಡೆದುಕೊಂಡಿವೆ.
ಪ್ರಮಾಣವಚನ ಸಮಾರಂಭದ ಕುರಿತು ಕಾಂಗ್ರೆಸ್ ಒಳವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಡಿಕೆಶಿ ಆರಂಭಿಕ ಹಂತದಲ್ಲಿ ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಆದರೆ ಉಪ ಮುಖ್ಯಮಂತ್ರಿ ಸೇರಿದಂತೆ ಕನಿಷ್ಠ 8 ಮಂದಿ ಸಚಿವರು ಕೂಡ ಮೊದಲ ಹಂತದಲ್ಲೇ ಪ್ರಮಾಣವಚನ ಸ್ವೀಕರಿಸಬೇಕು ಎಂಬ ಒತ್ತಡವನ್ನು ಪಕ್ಷದ ಹಿರಿಯ ನಾಯಕರು ಹೇರಿದ್ದಾರೆ. ಈ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್, ವಿಶೇಷವಾಗಿ ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿ ಹೆಸರನ್ನು ಪ್ರಸ್ತಾಪಿಸಲಿದ್ದು, ಕೇಂದ್ರ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅನುಮೋದನೆ ನೀಡಲಿದ್ದಾರೆ ಎನ್ನಲಾಗಿದೆ.
ಅದಾದ ಬಳಿಕ ಡಿಕೆಶಿ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೂರು ದಿನಗಳಿಂದ ರಾಜಕೀಯ ಬೆಳವಣಿಗೆಗಳ ಕುರಿತು ಮೌನ ವಹಿಸಿದ್ದ ಡಿ.ಕೆ. ಶಿವಕುಮಾರ್, ಇದೀಗ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಸಿಎಲ್ಪಿ ಸಭೆಯ ಬಗ್ಗೆ ಮಾಹಿತಿ ನೀಡಿರುವುದು ರಾಜಕೀಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm