ಬ್ರೇಕಿಂಗ್ ನ್ಯೂಸ್
30-05-26 01:14 pm HK News Staffer ಕರ್ನಾಟಕ
ಬೆಂಗಳೂರು, ಮೇ 30: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವುದು ಖಚಿತವಾದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆ ಕುರಿತ ಚರ್ಚೆ ತೀವ್ರಗೊಂಡಿದೆ.
ಈವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ಬಿ.ಕೆ. ಹರಿಪ್ರಸಾದ್ ಹೆಸರು ದಿಢೀರಾಗಿ ರೇಸ್ಗೆ ಎಂಟ್ರಿ ಕೊಟ್ಟಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಒಬಿಸಿ ಕೋಟಾದಡಿ ಹರಿಪ್ರಸಾದ್ಗೆ ಅವಕಾಶ?
ಮೂಲಗಳ ಪ್ರಕಾರ, ಒಬಿಸಿ ಸಮುದಾಯದ ಪ್ರತಿನಿಧಿತ್ವದ ಆಧಾರದಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ಸತೀಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಹೆಚ್ಚು ಒತ್ತು ನೀಡಿದರೆ, ಅಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೈಕಮಾಂಡ್ಗೆ ಸತೀಶ್ ಬೇಡಿಕೆಯೇ ಸವಾಲು
ಸತೀಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನೂ ಬಯಸಿದ್ದಾರೆ ಎನ್ನಲಾಗುತ್ತಿದೆ. ಆದರೆ "ಒಬ್ಬ ವ್ಯಕ್ತಿಗೆ ಒಂದು ಹುದ್ದೆ" ಎಂಬ ಕಾಂಗ್ರೆಸ್ ಹೈಕಮಾಂಡ್ನ ನೀತಿ ಈ ಬೇಡಿಕೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಇದೇ ವಿಚಾರ ಇದೀಗ ಪಕ್ಷದ ಉನ್ನತ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಾತ್ರ ಒಪ್ಪಿಕೊಂಡರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮ ರಾಜಕೀಯ ಪ್ರಭಾವ ಕುಗ್ಗಬಹುದು ಎಂಬ ಆತಂಕ ಸತೀಶ್ ಜಾರಕಿಹೊಳಿ ಅವರಿಗೆ ಇದೆ ಎನ್ನಲಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಮತ್ತೊಬ್ಬ ನಾಯಕರ ಪಾಲಾದರೆ ಸ್ಥಳೀಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀಳಬಹುದು ಎಂಬ ಲೆಕ್ಕಾಚಾರ ಅವರದ್ದಾಗಿದೆ.
ಸಿಎಲ್ಪಿ ಸಭೆಯಲ್ಲಿ ಚರ್ಚೆ ಸಾಧ್ಯತೆ
ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಹೊಸ ಸರ್ಕಾರದ ರಚನೆ ಜತೆಗೆ ಪಕ್ಷದ ಸಂಘಟನಾ ಪುನರ್ವ್ಯವಸ್ಥೆಯೂ ಕಾಂಗ್ರೆಸ್ ಹೈಕಮಾಂಡ್ಗೆ ಮಹತ್ವದ ಸವಾಲಾಗಿ ಪರಿಣಮಿಸಿದೆ.
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am