ಬ್ರೇಕಿಂಗ್ ನ್ಯೂಸ್
30-05-26 06:45 pm HK News Staffer ಕರ್ನಾಟಕ
ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಉಪಸ್ಥಿತಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸೂಚಿಸಿದ್ದು ಸಭೆಯಲ್ಲಿ ಸರ್ವಾನುಮತದ ಅಂಗೀಕಾರ ನೀಡಲಾಯಿತು.
ಇದೇ ವೇಳೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದುಬಂದಿದೆ. ಕಂಠೀರವ, ವಿಧಾನಸೌಧ ಎದುರಲ್ಲಿ ಪ್ರಮಾಣವಚನ ಸಮಾರಂಭ ನಡೆಸುವ ಬಗ್ಗೆಯೂ ಚರ್ಚೆಯಾಗಿದೆ.
ಇದೇ ವೇಳೆ, ಮುಖ್ಯಮಂತ್ರಿ ಜೊತೆಗೆ 14 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಹಿರಿಯರು ಮತ್ತು ಹೊಸಬರ ಸಮ್ಮಿಳಿತ ಸಂಪುಟ ರಚನೆಗೆ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಪ್ರಮಾಣ ಸ್ವೀಕರಿಸುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೆಜೆ ಜಾರ್ಜ್, ಡಾ. ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್(ಮುನಿಯಪ್ಪ ಪುತ್ರಿ), ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ ಮತ್ತು ಎನ್.ಎ. ಹ್ಯಾರಿಸ್ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾಹಿತಿ ಇದೆ.
ಕೆಲವು ಹಿರಿಯರನ್ನು ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಪಕ್ಷದ ಹೈಕಮಾಂಡ್ ನಲ್ಲಿ ಚರ್ಚೆಯಾಗಿದೆ. ಇದರಂತೆ, ಎಚ್.ಕೆ ಪಾಟೀಲ್, ಶಿವಾನಂದ ಪಾಟೀಲ್, ಕೆ.ಎಚ್ ಮುನಿಯಪ್ಪ, ಆರ್.ಬಿ ತಿಮ್ಮಾಪುರ್ ಸೇರಿದಂತೆ ಕೆಲವು ಹಿರಿಯರನ್ನು ಕೈಬಿಡುವ ಸಾಧ್ಯತೆ ಇದೆ. ಕಾನೂನು ಸಚಿವರಾಗಿದ್ದ ಎಚ್.ಕೆ ಪಾಟೀಲ್ ಸ್ಪೀಕರ್ ಆಗುವ ಸಾಧ್ಯತೆ ಇದೆ. ಕಳೆದ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಯುಟಿ ಖಾದರ್ ಸಚಿವರಾಗಲಿದ್ದಾರೆ. ಎರಡನೇ ಹಂತದಲ್ಲಿ ಹೆಚ್ಚಿನ ಹೊಸಬರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm