ಬ್ರೇಕಿಂಗ್ ನ್ಯೂಸ್
01-06-26 09:44 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 01: ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಜಮೀರ್ ಅಹಮದ್ ಖಾನ್ ವಿರುದ್ಧ ಇದೀಗ ಹೊಸ ವಿವಾದ ಸ್ಫೋಟಗೊಂಡಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸೂಚಿಸಿರುವುದಾಗಿ ಹೇಳಲಾಗಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
'ಕಾಕ್ರೋಚ್ ಪಾರ್ಟಿ' ಹೆಸರಿನ ಎಕ್ಸ್ ಖಾತೆಯಲ್ಲಿ ಬಿಡುಗಡೆಗೊಂಡಿರುವ ಈ ಆಡಿಯೋದಲ್ಲಿ ಜಮೀರ್ ಅಹಮದ್ ಮತ್ತು ದಾವಣಗೆರೆಯ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಸಿರಾಜ್ ನಡುವಿನ ಸಂಭಾಷಣೆ ಇದೆ ಎಂದು ಹೇಳಲಾಗುತ್ತಿದೆ.
ಆಡಿಯೋದಲ್ಲಿ ಏನಿದೆ?
ವೈರಲ್ ಆಗಿರುವ ಆಡಿಯೋದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾನದ ಕುರಿತು ಚರ್ಚೆ ನಡೆಯುತ್ತಿದ್ದು, "ಮುಸ್ಲಿಂ ಮತದಾರರನ್ನು ಬಲವಂತವಾಗಿ ಮತಗಟ್ಟೆಗೆ ಕರೆತರಬೇಡಿ", "ಕಾಂಗ್ರೆಸ್ಗೆ ಮತ ಹಾಕುವ ಬದಲು ಕುಕ್ಕರ್ (ಪಕ್ಷೇತರ ಅಭ್ಯರ್ಥಿ) ಅಥವಾ ಎಸ್ಡಿಪಿಐಗೆ ಮತ ಹಾಕಲಿ" ಎಂಬ ಮಾತುಗಳು ಕೇಳಿಬಂದಿವೆ ಎನ್ನಲಾಗಿದೆ.
ಸಂಭಾಷಣೆಯಲ್ಲಿ ಮತದಾನದ ಪ್ರಮಾಣ ಕಡಿಮೆ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಧ್ವನಿಯೊಂದು, "ಇದು ನನ್ನ ಮರ್ಯಾದೆಯ ಪ್ರಶ್ನೆ, ನನಗೆ ರಾತ್ರಿ ನಿದ್ದೆಯೇ ಬಂದಿಲ್ಲ" ಎಂದು ಹೇಳಿರುವುದು ಕೂಡ ಚರ್ಚೆಗೆ ಗ್ರಾಸವಾಗಿದೆ.
ಇದೇ ವೇಳೆ, ಮತ್ತೊಂದು ಧ್ವನಿ "ನಾವು ಕುಕ್ಕರ್ಗೆ ಮಾತ್ರ ಮತ ಕೇಳಿದ್ದೇವೆ" ಎಂದು ಹೇಳಿರುವುದು ಆಡಿಯೋದಲ್ಲಿನ ಅತ್ಯಂತ ವಿವಾದಾತ್ಮಕ ಭಾಗವಾಗಿದೆ.
ಸಚಿವ ಸ್ಥಾನದ ಲಾಬಿ ನಡುವೆಯೇ ಸ್ಫೋಟ
ವಿಶೇಷವೆಂದರೆ, ನೂತನ ಸಚಿವ ಸಂಪುಟ ರಚನೆ ಕುರಿತು ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಈ ಆಡಿಯೋ ವೈರಲ್ ಆಗಿದೆ. ಜಮೀರ್ ಅಹಮದ್ ಅವರಿಗೆ ಪ್ರಮುಖ ಖಾತೆ ಅಥವಾ ಉನ್ನತ ಸ್ಥಾನ ಸಿಗಬಹುದು ಎಂಬ ರಾಜಕೀಯ ಲೆಕ್ಕಾಚಾರಗಳ ನಡುವೆ ಈ ಬೆಳವಣಿಗೆ ಕಾಂಗ್ರೆಸ್ ನಾಯಕರಲ್ಲೂ ಅಚ್ಚರಿ ಮೂಡಿಸಿದೆ.
"ಇದು ನನ್ನ ಧ್ವನಿ ಅಲ್ಲ" – ಜಮೀರ್ ಸಮರ್ಥನೆ?
ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಈ ವಿಚಾರ ದೊಡ್ಡ ವಿವಾದವಾಗುವ ಮುನ್ನವೇ ಜಮೀರ್ ಅಹಮದ್ ಅವರು ಕಾಂಗ್ರೆಸ್ ನಾಯಕತ್ವಕ್ಕೆ ತಮ್ಮ ವಿವರಣೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಆಡಿಯೋದಲ್ಲಿರುವ ಧ್ವನಿ ತಮ್ಮದಲ್ಲ ಎಂದು ಹೇಳಿರುವ ಅವರು, ಇದು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ಆಡಿಯೋ ಆಗಿದ್ದು, ತಮ್ಮ ರಾಜಕೀಯ ಭವಿಷ್ಯಕ್ಕೆ ಧಕ್ಕೆ ತರುವ ಉದ್ದೇಶದಿಂದ ರೂಪಿಸಿದ ಷಡ್ಯಂತ್ರ ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನು ಜಮೀರ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವರಿಷ್ಠರಿಗೆ ಸ್ಥಳೀಯ ಮುಖಂಡರು ಪತ್ರ ಬರೆದಿದ್ದಾರೆ.
ಮಾಜಿ ಮೇಯರ್ ಕೆ. ಚಮನ್ ಸಾಬ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಅವರು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಪತ್ರದ ಮೂಲಕ ಮನವಿ ಮಾಡಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm