ಬ್ರೇಕಿಂಗ್ ನ್ಯೂಸ್
03-06-26 12:44 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 3: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ಡೆಪ್ಯುಟಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಖಾದರ್, ನೂತನ ಸಚಿವ ಸಂಪುಟ ಸೇರ್ಪಡೆಗೆ ಅಧಿಕೃತ ಸಿದ್ಧತೆ ಆರಂಭಿಸಿದ್ದಾರೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬಂದ ಬೆನ್ನಲ್ಲೇ ಖಾದರ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರಿಗೆ ಕೃತಜ್ಞತೆ ;
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಯು.ಟಿ. ಖಾದರ್ ಕೃತಜ್ಞತೆ ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಕುರಿತು ಮಾಹಿತಿ ನೀಡಿದ್ದು, ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ
ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಯು.ಟಿ. ಖಾದರ್, ಯಾವುದೇ ನಿರ್ದಿಷ್ಟ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದು, “ನಾನು ಯಾವುದೇ ಖಾತೆಗಾಗಿ ಒತ್ತಡ ಹಾಕಿಲ್ಲ. ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಸಂತೋಷ. ಆದರೆ ಪಕ್ಷದ ನಾಯಕರು ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿರ್ವಹಿಸಲು ಸಿದ್ಧನಿದ್ದೇನೆ. ಕ್ರಿಕೆಟ್ನಲ್ಲಿ ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುವಂತೆ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆ” ಎಂದು ಹೇಳಿದರು.



ಆರೋಗ್ಯ ಖಾತೆ ಸಿಗುವ ಸಾಧ್ಯತೆ ?
ಈ ಹಿಂದೆ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿರುವ ಯು.ಟಿ. ಖಾದರ್ ಅವರಿಗೆ ಡಿಕೆ ಶಿವಕುಮಾರ್ ಸರ್ಕಾರದಲ್ಲೂ ಆರೋಗ್ಯ ಖಾತೆಯೇ ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಅಂತಿಮ ನಿರ್ಧಾರ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಕೈಯಲ್ಲಿದ್ದು, ಅಧಿಕೃತ ಘೋಷಣೆಗಾಗಿ ಕಾದು ನೋಡಬೇಕಿದೆ.
ಬೆಂಬಲಿಗರ ಸಂಭ್ರಮಾಚರಣೆ ;
ಖಾದರ್ ಸಚಿವರಾಗುವುದು ಖಚಿತ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಸಮೀಪದ ಖಾದರ್ ನಿವಾಸಕ್ಕೆ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am