ಬ್ರೇಕಿಂಗ್ ನ್ಯೂಸ್
04-06-26 07:35 pm HK News Staffer ಕರ್ನಾಟಕ
ಬೆಂಗಳೂರು, ಜೂ.4: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡವೆಂದು ಹಿರಿಯ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಧ್ಯಾಹ್ನ ಸಿಎಂ ಡಿಕೆಶಿ ಜೊತೆಗೆ ಮೀಟಿಂಗ್ ಹಾಲ್ ನಲ್ಲಿ ಕೆಲವು ಸಚಿವರು ಮಾತುಕತೆ ಮಾಡಿದ್ದು ಅದರಲ್ಲಿ ರಾಮಲಿಂಗಾರೆಡ್ಡಿ ಅವರೂ ಪಾಲ್ಗೊಂಡಿದ್ದರು. ಸಭೆಯಲ್ಲಿ ಬಿಸಿ ಬಿಸಿ ಮಾತುಕತೆ ಆಗಿದ್ದು ರೆಡ್ಡಿ ಅರ್ಧಕ್ಕೆ ಎದ್ದು ಬಂದಿದ್ದಾರೆ.
ರಾಮಲಿಂಗಾರೆಡ್ಡಿ ಅವರು ಈ ಬಾರಿ ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಇದರಿಂದ ಸಿಟ್ಟಾದ ರಾಮಲಿಂಗಾರೆಡ್ಡಿ ಸಭೆಯಿಂದ ಹೊರಬಂದು ಸಿಟ್ಟು ತೋರಿಸಿಕೊಳ್ಳದಿದ್ದರೂ ನೇರವಾಗಿ ಸಿಎಂ ಕಚೇರಿಯತ್ತ ತೆರಳಿದ್ದಾರೆ. ಇದರಿಂದ ಮಾಧ್ಯಮದವರಿಗೂ ಏನೋ ಎಡವಟ್ಟು ಆದ ಮಾಹಿತಿ ಸೋರಿಕೆಯಾಗಿತ್ತು. ಆನಂತರ, ಕಚೇರಿಗೆ ಬಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಈ ವೇಳೆ, ತನಗೆ ಸಚಿವ ಸ್ಥಾನವೇ ಬೇಡವೆಂದು ಹೇಳಿ ರಾಜೀನಾಮೆ ನೀಡಿದ್ದಾರೆಂಬ ವದಂತಿ ಹರಡಿದೆ.
2023ರಲ್ಲಿ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಆಗಿನ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪಡೆದಿದ್ದರು. ಬಳಿಕ ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು ಎನ್ನಲಾಗಿದೆ.
ಆದರೆ ಈಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ನೀಡಿರುವುದು ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ಅವರಲ್ಲಿ ಬೇಸರ ಮೂಡಿಸಿದೆ. ನನಗೆ ಸಚಿವ ಸ್ಥಾನವೇ ಬೇಡ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ. ಅವರನ್ನು ಸಮಾಧಾನಿಸಿ ಮನವೊಲಿಸಲು ಡಿ.ಕೆ. ಶಿವಕುಮಾರ್ ಪಯತ್ನ ನಡೆಸಿದ್ದಾರೆ. ಆದರೆ ಅದಕ್ಕೆ ಒಪ್ಪದ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನದಲ್ಲಿ ಹೊರ ನಡೆದಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm