ಬ್ರೇಕಿಂಗ್ ನ್ಯೂಸ್
05-06-26 10:29 am HK News Staffer ಕರ್ನಾಟಕ
ಬೆಂಗಳೂರು, ಜೂ.05: ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡ ರಾಮಲಿಂಗಾರೆಡ್ಡಿ ಅವ್ರು ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದು, ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತಾಡಿದ ರಾಮಲಿಂಗಾರೆಡ್ಡಿ , ನಾನು 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದೆ. ವೀರಪ್ಪ ಮೊಯ್ಲಿ ನನಗೆ ಕರೆದು ಟಿಕೆಟ್ ಕೊಟ್ರು. ಆರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾರ ಬಳಿಯೂ ಇಂಥಹುದೇ ಖಾತೆ ಕೊಡಿ ಅಂತ ಲಾಬಿ ಮಾಡಿಲ್ಲ. ಅವರೇ ಎರಡು ಬಾರಿ ಕರೆದಿ ಬೆಂಗಳೂರು ಅಭಿವೃದ್ದಿ ಕೊಡ್ತೀವಿ ಅಂತ ಹೇಳಿ ಈಗ ಕೊಡಲಿಲ್ಲ. ಈ ವಿಚಾರಕ್ಕೆ ಬೇಸರವಾಗಿ ಈ ನಿರ್ಧಾರ ತೆಗೆದುಕೊಂಡಿರೋದಾಗಿ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಮಾಡುವ ಹಿಂದಿನ ದಿನವೇ ಡಿಕೆ ಅವರನ್ನ ಹೋಗಿ ಭೇಟಿ ಮಾಡಿದ್ದೆ. ನಾನು ಯಾರಿಗೂ ಮಂತ್ರಿ ಮಾಡಿ ಅಂತ ಕೇಳಿಲ್ಲ. ಆದ್ರೆ ಅವರೇ ಕರೆದು ಬೆಂಗಳೂರು ಖಾತೆ ಕೊಡ್ತೀನಿ ಅಂದವರು ಇದೀಗ ಮಾತು ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗುರುವಾರ ರಾತ್ರಿ ಸಚಿವರಿಗೆ ಖಾತೆ ಅಧಿಕೃತ ಹಂಚಿಕೆಯಾದ ಹಿನ್ನೆಲೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಸಿಎಂಗೆ ಕರೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರನ್ನು ಈ ಸಂದರ್ಭದಲ್ಲಿ ಸಮಾಧಾನ ಪಡಿಸಿದ ಡಿಕೆ ಶಿವಕುಮಾರ್, ಈ ಬಗ್ಗೆ ಎಐಸಿಸಿ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಆದರೆ ಅವರು ಖಾತೆ ಬದಲಾವಣೆಗೆ ಒಪ್ಪಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm