ಬ್ರೇಕಿಂಗ್ ನ್ಯೂಸ್
09-06-26 07:04 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 09: ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ಅವರು ನೋಂದಣಿ ಮಾಡಿಸಲು ರೆಡಿಯಾಗಿ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೆಹರು ಪ್ರಧಾನಿ ಆಗಿದ್ದರು, ಅವರು ಆರ್ಎಸ್ಎಸ್ ವಿರೋಧ ಮಾಡಿದ್ರು. ಆರ್ಎಸ್ಎಸ್ ಇನ್ನು ಇದೆ. ನೆಹರು ಇಲ್ಲ. ಇಂದಿರಾಗಾಂಧಿ ತುರ್ತುಸ್ಥಿತಿ ಹೇರಿದ್ರು. ಆರ್ಎಸ್ಎಸ್ ಬ್ಯಾನ್ ಮಾಡಿದ್ರು. ಇಂದಿರಾಗಾಂಧಿ ಇಲ್ಲ. ಆರ್ಎಸ್ಎಸ್ ಇನ್ನು ಇದೆ. ಪ್ರಿಯಾಂಕ್ ಅವರೇ ನೀವು ನಿನ್ನೆ ಮೊನ್ನೆ ಹೋಂ ಮಿನಿಸ್ಟರ್ ಆಗಿರೋದು. ನಿಮ್ಮ ಅಪ್ಪ ನಿಮಗಿಂತ ಮುಂಚೆ ಗೃಹ ಸಚಿವರು ಆಗಿದ್ರು. ನಿಮ್ಮಪ್ಪನಿಂದ ಏನು ಮಾಡಲು ಆಗಿಲ್ಲ ಇನ್ನು ನಿಮ್ಮಿಂದ ಆಗುತ್ತಾ ಎಂದು ಕಿಡಿಕಾರಿದರು.
ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ.ಆರ್ಎಸ್ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ. ನೋಂದಣಿ ಮಾಡೋಕೆ ಅದು ಸಂಘ ಅಲ್ಲ. ಸಮಾಜವನ್ನ ಸಂಘಟಿಸುವ ಸಂಘಟನೆ ಅದು. ನಿಮಗೆ ಗೃಹ ಸಚಿವರಾಗಿ ಬೇರೆ ಕೆಲಸ ಇದೆ. ಅದನ್ನ ನೋಡಿ. ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ. ದರೋಡೆ, ಡ್ರಗ್ಸ್, ಹೆಣ್ಣು ಮಕ್ಕಳು ನಾಪತ್ತೆ ಈ ಬಗ್ಗೆ ಗಮನಹರಿಸಿ. ಆರ್ಎಸ್ಎಸ್ನಿಂದ ಅಪಾಯ ಇಲ್ಲ. ಇಲ್ಲೇ ಇದ್ದು ಬಾಂಬ್ ತಯಾರು ಮಾಡೋರ ಕಡೆ ಗಮನ ಕೊಡಿ ಎಂದು ಹರಿಹಾಯ್ದರು.
ನೀವು ಹೋಂ ಮಿನಿಸ್ಟರ್, ಹೋಂ ಮಿನಿಸ್ಟರ್ ರೀತಿ ವರ್ತನೆ ಮಾಡಿ, ಗೂಂಡಾ ರೀತಿ ವರ್ತನೆ ಮಾಡಬೇಡಿ. ಅಧಿಕಾರ ಶಾಶ್ವತ ಅಲ್ಲ. ಅಧಿಕಾರದಲ್ಲಿ ಮೆರೆದವರಿಗೆ ಇಂದು ಪಶ್ಚಿಮ ಬಂಗಾಳ ಅಟ್ಟಾಡಿಸಿ ಹೊಡೆಯುತ್ತಿದ್ದಾರೆ. ಆ ಭಯದಿಂದ ಎಚ್ಚರಿಕೆ ವಹಿಸಿ. ನೀವು ಮಾಡಬೇಕಾದ ಕೆಲಸ ಬೇರೆ ಇದೆ ಅದನ್ನ ಮಾಡಿ. ಡ್ರಗ್ಸ್, ಅಕ್ರಮ ವಲಸಿಗರ ಬಗ್ಗೆ ಗಮನ ಕೊಡಿ. ಬೆಂಕಿ ಹಚ್ಚೋ ಕೆಲಸ ಮಾಡಬೇಡಿ. ಬೆಂಕಿ ಆರಿಸೋ ಕೆಲಸ ಮಾಡಿ. ಬೆಂಕಿ ಹಚ್ಚೋಕೆ ಹೋದ್ರೆ ಆ ಬೆಂಕಿ ನಿಮ್ಮನ್ನು ಸುಡುತ್ತದೆ ಎಂದು ಕೆಂಡ ಕಾರಿದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am