ಬ್ರೇಕಿಂಗ್ ನ್ಯೂಸ್
11-06-26 08:31 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 11: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೆ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವ ವಿಚಾರ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ನೂತನ ಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ. 52 ರಷ್ಟು ಅನುದಾನ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ, ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಸಮುದಾಯದ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಜಾತಿಗಳು ಬರುತ್ತವೆ. ಪ್ರವರ್ಗ 1ರಲ್ಲಿಯೇ 147 ಜಾತಿಗಳಿದ್ದು, ಇವೆಲ್ಲವನ್ನೂ ಕಡೆಗಣಿಸಿ ಕೇವಲ ಮೂರ್ನಾಲ್ಕು ಸಮುದಾಯಕ್ಕೆ ತರಾತುರಿಯಲ್ಲಿ ಅನುದಾನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಸ್ವಜನರಿಗೆ ಆದ್ಯತೆ ನೀಡಿದರೇ ಎನ್ನುವ ಅನುಮಾನ ಮೂಡಿಸಿದೆ. ಹಿಂದುಳಿದ ವರ್ಗಗಳ ಪೈಕಿ ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ಅಧಿಕಾರದಿಂದ ಇಳಿಯುವ ವೇಳೆ ತರಾತುರಿಯಲ್ಲಿ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm