ಬ್ರೇಕಿಂಗ್ ನ್ಯೂಸ್
11-06-26 08:31 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 11: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೆ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವ ವಿಚಾರ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ನೂತನ ಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ. 52 ರಷ್ಟು ಅನುದಾನ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ, ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಸಮುದಾಯದ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಜಾತಿಗಳು ಬರುತ್ತವೆ. ಪ್ರವರ್ಗ 1ರಲ್ಲಿಯೇ 147 ಜಾತಿಗಳಿದ್ದು, ಇವೆಲ್ಲವನ್ನೂ ಕಡೆಗಣಿಸಿ ಕೇವಲ ಮೂರ್ನಾಲ್ಕು ಸಮುದಾಯಕ್ಕೆ ತರಾತುರಿಯಲ್ಲಿ ಅನುದಾನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಸ್ವಜನರಿಗೆ ಆದ್ಯತೆ ನೀಡಿದರೇ ಎನ್ನುವ ಅನುಮಾನ ಮೂಡಿಸಿದೆ. ಹಿಂದುಳಿದ ವರ್ಗಗಳ ಪೈಕಿ ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ಅಧಿಕಾರದಿಂದ ಇಳಿಯುವ ವೇಳೆ ತರಾತುರಿಯಲ್ಲಿ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm