ಬ್ರೇಕಿಂಗ್ ನ್ಯೂಸ್
18-06-26 07:15 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 18: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರು ಅಭ್ಯರ್ಥಿಗಳು ನಿರೀಕ್ಷೆ ಮೀರಿದ ಗೆಲುವು ದಾಖಲಿಸಿದ್ದಾರೆ.
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿಯಿಂದ 3-4 ಶಾಸಕರು ಮತ್ತು ಜೆಡಿಎಸ್ ನಿಂದ 6-7 ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆಮೂಲಕ ಮೈತ್ರಿ ಪಕ್ಷದ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಕಾಂಗ್ರೆಸ್ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿತ್ತು. ಈ ಪೈಕಿ ಬಿಜೆಪಿ ಅಭ್ಯರ್ಥಿಗಳಾದ ರಘು ಕೌಟಿಲ್ಯ(29) ಮತ್ತು ಲಿಂಗರಾಜ ಪಾಟೀಲ್ ಪ್ರಯಾಸದ ಗೆಲುವು ಪಡೆದಿದ್ದಾರೆ. ಬಿಜೆಪಿ ಸ್ಪಷ್ಟ ಮತಗಳನ್ನು ಹೊಂದಿದ್ದರೂ, ಲಿಂಗರಾಜ್ 27 (ಗೆಲುವಿನ ಗೆರೆ 28) ಮತಗಳನ್ನಷ್ಟೆ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಕೇವಲ 14 ಮತಗಳನ್ನು ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಪಿವಿ ಮೋಹನ್ 29, ಇತರ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 30 ಮತಗಳನ್ನು ಗಳಿಸಿದ್ದಾರೆಂದು ತಿಳಿದುಬಂದಿದೆ.
ಒಟ್ಟು 222 ಶಾಸಕರಲ್ಲಿ 221 ಮತಗಳು ಸಿಂಧುವಾಗಿತ್ತು. ಕಾಂಗ್ರೆಸ್ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ವಿಶೇಷ. ಬಿಜೆಪಿಯಲ್ಲಿ ಉಚ್ಚಾಟಿತ ಶಾಸಕರಲ್ಲದೆ, ನಾಲ್ಕು ಮಂದಿ ಅಡ್ಡ ಮತದಾನ ಮಾಡಿರುವುದು ರಾಜ್ಯ ಬಿಜೆಪಿ ಪಾಲಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಈ ಫಲಿತಾಂಶ ಬಿಜೆಪಿ- ಜೆಡಿಎಸ್ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದ್ದು ಇದರ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm