ಬ್ರೇಕಿಂಗ್ ನ್ಯೂಸ್
18-06-26 07:15 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 18: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರು ಅಭ್ಯರ್ಥಿಗಳು ನಿರೀಕ್ಷೆ ಮೀರಿದ ಗೆಲುವು ದಾಖಲಿಸಿದ್ದಾರೆ.
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿಯಿಂದ 3-4 ಶಾಸಕರು ಮತ್ತು ಜೆಡಿಎಸ್ ನಿಂದ 6-7 ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆಮೂಲಕ ಮೈತ್ರಿ ಪಕ್ಷದ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಕಾಂಗ್ರೆಸ್ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿತ್ತು. ಈ ಪೈಕಿ ಬಿಜೆಪಿ ಅಭ್ಯರ್ಥಿಗಳಾದ ರಘು ಕೌಟಿಲ್ಯ(29) ಮತ್ತು ಲಿಂಗರಾಜ ಪಾಟೀಲ್ ಪ್ರಯಾಸದ ಗೆಲುವು ಪಡೆದಿದ್ದಾರೆ. ಬಿಜೆಪಿ ಸ್ಪಷ್ಟ ಮತಗಳನ್ನು ಹೊಂದಿದ್ದರೂ, ಲಿಂಗರಾಜ್ 27 (ಗೆಲುವಿನ ಗೆರೆ 28) ಮತಗಳನ್ನಷ್ಟೆ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಕೇವಲ 14 ಮತಗಳನ್ನು ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಪಿವಿ ಮೋಹನ್ 29, ಇತರ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 30 ಮತಗಳನ್ನು ಗಳಿಸಿದ್ದಾರೆಂದು ತಿಳಿದುಬಂದಿದೆ.
ಒಟ್ಟು 222 ಶಾಸಕರಲ್ಲಿ 221 ಮತಗಳು ಸಿಂಧುವಾಗಿತ್ತು. ಕಾಂಗ್ರೆಸ್ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ವಿಶೇಷ. ಬಿಜೆಪಿಯಲ್ಲಿ ಉಚ್ಚಾಟಿತ ಶಾಸಕರಲ್ಲದೆ, ನಾಲ್ಕು ಮಂದಿ ಅಡ್ಡ ಮತದಾನ ಮಾಡಿರುವುದು ರಾಜ್ಯ ಬಿಜೆಪಿ ಪಾಲಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಈ ಫಲಿತಾಂಶ ಬಿಜೆಪಿ- ಜೆಡಿಎಸ್ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದ್ದು ಇದರ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿದೆ.
18-06-26 07:15 pm
HK News Staffer
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm