ಬ್ರೇಕಿಂಗ್ ನ್ಯೂಸ್
18-06-26 09:57 pm HK News Staffer ಕರ್ನಾಟಕ
ಧಾರವಾಡ, ಜೂನ್ 18: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆಗಳ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕಾಶ್ ರಾಜ್ ಭಾವಚಿತ್ರ ಹರಿದು ಪ್ರತಿಭಟನೆ ನಡೆಸಿ, ಧರ್ಮಸ್ಥಳದ ಹೆಸರಿಗೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದನ್ನು ಪ್ರಸ್ತಾಪಿಸಿದ ಮುತಾಲಿಕ್, “ಪ್ರಕಾಶ್ ರಾಜ್ ಸ್ವತಃ ಚಿನ್ನಯ್ಯ ಜೊತೆ ಸಂಪರ್ಕದಲ್ಲಿದ್ದ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದೇನೆ ಎಂದೂ ಹೇಳಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಿ, ಅಗತ್ಯವಿದ್ದರೆ ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.
ಧರ್ಮಸ್ಥಳವು ಶಿಕ್ಷಣ, ಆರೋಗ್ಯ, ಅನ್ನದಾನ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ದೇಶಕ್ಕೆ ಮಾದರಿಯಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರನ್ನು ಕೆಡಿಸುವ ಪ್ರಯತ್ನ ನಡೆದಿದೆ. ಈ ಷಡ್ಯಂತ್ರದ ಹಿಂದಿನ ಸತ್ಯ ಹೊರಬರಬೇಕು. ಚಿನ್ನಯ್ಯ ಮತ್ತು ಪ್ರಕಾಶ್ ರಾಜ್ ನಡುವೆ ಏನು ಸಂಬಂಧ ಎಂಬುದನ್ನು ಎಸ್ಐಟಿ ತನಿಖೆ ಮಾಡಬೇಕು ಎಂದು ಮುತಾಲಿಕ್ ಹೇಳಿದರು.
ಇದೇ ವೇಳೆ ಪ್ರಕಾಶ್ ರಾಜ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನೀವು ಬಹುಭಾಷಾ ನಟರಾಗಿರಬಹುದು. ಆದರೆ ಹಿಂದೂಗಳು ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಬೇಡಿ” ಎಂದು ಎಚ್ಚರಿಕೆ ನೀಡಿದರು.
ಧರ್ಮಸ್ಥಳ ಚರಿತ್ರೆ ವಧೆ ಮಾಡುವ ಉದ್ದೇಶದಿಂದಲೇ ಪ್ರಕಾಶ್ ರೈ ಬುರುಡೆ ಗ್ಯಾಂಗ್ ಗೆ ಬೆಂಬಲಿಸಿದ್ದಾರೆ. ರೈ ಅವರೇ ಧನ ಸಹಾಯ ಮಾಡಿ ಈ ಗ್ಯಾಂಗ್ ನಡೆಸುತ್ತಿದ್ದಾರೆ ಎಂದು ಶ್ರೀ ರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ ;
ಆರ್ ಎಸ್ಎಸ್ ನಂತಹ ಬೃಹತ್ ಸಂಘಟನೆ ಹಾಗೂ ಹಿಂದೂ ಧರ್ಮದ ಕುರಿತು ಮಾತನಾಡುವಾಗ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರದಿಂದ ಇರಬೇಕು. ಆರ್ಎಸ್ಎಸ್ನ ಸಾಂವಿಧಾನಿಕ ಮಾನ್ಯತೆ, ನೋಂದಣಿ ವಿವರಗಳು ಮತ್ತು ದೇಣಿಗೆಯ ಪಾರದರ್ಶಕತೆ ಬಗ್ಗೆ ಪ್ರಶ್ನಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವುದು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm