ಬ್ರೇಕಿಂಗ್ ನ್ಯೂಸ್
23-06-26 05:58 pm HK News Staffer ಕರ್ನಾಟಕ
ಬೆಂಗಳೂರು , ಜೂ.23: ರಾಜ್ಯ ಬಿಜೆಪಿಯಲ್ಲಿ ಅಡ್ಡಮತದಾನ ವಿವಾದದ ಕಾವು ಮುಂದುವರಿದಿರುವ ನಡುವೆಯೇ, ಈ ವಿಚಾರಕ್ಕೆ ಪವಿತ್ರ ಕ್ಷೇತ್ರ ಧರ್ಮಸ್ಥಳವನ್ನು ಎಳೆದು ತರಲು ನಡೆದ ಪ್ರಯತ್ನಕ್ಕೆ ಪಕ್ಷದ ಕೇಂದ್ರ ನಾಯಕತ್ವ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಅಡ್ಡಮತದಾನದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಹಾಗೂ ಶಾಸಕಾಂಗ ಪಕ್ಷದ ಸಭೆ ನಡೆಸುವ ಚರ್ಚೆ ನಡೆದಿದ್ದರೂ, ಬಿಜೆಪಿ ಹೈಕಮಾಂಡ್ ಇದಕ್ಕೆ ಸ್ಪಷ್ಟ ವಿರೋಧ ವ್ಯಕ್ತಪಡಿಸಿ ‘ರೆಡ್ ಸಿಗ್ನಲ್’ ನೀಡಿದೆ.
ಮೂಲಗಳ ಪ್ರಕಾರ, ಅಡ್ಡಮತದಾನ ನಡೆದಿರುವುದಕ್ಕೆ ರಾಜ್ಯ ನಾಯಕತ್ವದ ನಿರ್ಲಕ್ಷ್ಯ ಮತ್ತು ಸಂಘಟನಾ ವೈಫಲ್ಯವೇ ಪ್ರಮುಖ ಕಾರಣ ಎಂದು ವರಿಷ್ಠರು ನೇರವಾಗಿ ಪ್ರಶ್ನಿಸಿದ್ದಾರೆ. ಪಕ್ಷದ ಶಾಸಕರ ಮೇಲೆ ಸೂಕ್ತ ಹಿಡಿತ ಸಾಧಿಸುವಲ್ಲಿ ಹಾಗೂ ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವಲ್ಲಿ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬ ಅಭಿಪ್ರಾಯವನ್ನು ಹೈಕಮಾಂಡ್ ವ್ಯಕ್ತಪಡಿಸಿದೆ ಎನ್ನಲಾಗಿದೆ.
“ನಿಮ್ಮ ತಪ್ಪು ಮತ್ತು ಸಂಘಟನಾ ವೈಫಲ್ಯದಿಂದಲೇ ಅಡ್ಡಮತದಾನಕ್ಕೆ ಅವಕಾಶ ಸಿಕ್ಕಿದೆ. ಶಾಸಕರ ಅಸಮಾಧಾನವನ್ನು ಸರಿಯಾದ ಸಮಯದಲ್ಲಿ ಗುರುತಿಸಲು ಸಾಧ್ಯವಾಗಲಿಲ್ಲ. ನಿಮ್ಮದೇ ಶಾಸಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಲು ಅವಕಾಶ ಸಿಕ್ಕಿದ್ದರೆ ಅದರ ಹೊಣೆಗಾರಿಕೆಯಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂಬ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದರ ಜೊತೆಗೆ ಧರ್ಮಸ್ಥಳದಂತಹ ಪವಿತ್ರ ಧಾರ್ಮಿಕ ಕ್ಷೇತ್ರವನ್ನು ರಾಜಕೀಯ ವಿವಾದಗಳಿಗೆ ಎಳೆದು ತರುವುದರಿಂದ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗಬಹುದು ಎಂದು ಹೈಕಮಾಂಡ್ ಎಚ್ಚರಿಸಿದೆ. ಈಗಾಗಲೇ ಉಂಟಾಗಿರುವ ಹಾನಿಯನ್ನು ಸರಿಪಡಿಸುವತ್ತ ಗಮನಹರಿಸಬೇಕು ಹೊರತು, ಆಣೆ-ಪ್ರಮಾಣ ಅಥವಾ ಪ್ರತಿಜ್ಞಾ ರಾಜಕೀಯದ ಮೂಲಕ ಹೊಸ ವಿವಾದಗಳಿಗೆ ಕಾರಣವಾಗಬಾರದು ಎಂದು ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ಮೂಲಕ ಅಡ್ಡಮತದಾನದ ಸತ್ಯಾಸತ್ಯತೆ ಬಹಿರಂಗಪಡಿಸುವ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದವು. ಆದರೆ ಈ ಬೆಳವಣಿಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿದ್ದು, ಧಾರ್ಮಿಕ ಕ್ಷೇತ್ರಗಳ ಹೆಸರನ್ನು ರಾಜಕೀಯ ಸಂಘರ್ಷಗಳಲ್ಲಿ ಬಳಸಬಾರದು ಎಂಬ ಸಂದೇಶವನ್ನು ಹೈಕಮಾಂಡ್ ಸ್ಪಷ್ಟವಾಗಿ ನೀಡಿದೆ ಎಂದು ಪಕ್ಷದ ವಲಯಗಳು ಹೇಳುತ್ತಿವೆ.
ವರಿಷ್ಠರ ಈ ಕಠಿಣ ನಿಲುವಿನ ಬಳಿಕ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿದ್ದ ಆಣೆ-ಪ್ರಮಾಣ ಕಾರ್ಯಕ್ರಮ ಹಾಗೂ ಶಾಸಕಾಂಗ ಪಕ್ಷದ ಸಭೆಯ ವಿಚಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಡ್ಡಮತದಾನ ವಿವಾದಕ್ಕೆ ಧರ್ಮಸ್ಥಳವನ್ನು ಕೇಂದ್ರಬಿಂದುವಾಗಿಸುವ ಯತ್ನಕ್ಕೆ ಸದ್ಯಕ್ಕೆ ತೆರೆ ಬಿದ್ದಂತಾಗಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm