ಬ್ರೇಕಿಂಗ್ ನ್ಯೂಸ್
24-06-26 05:55 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಯ ಅನುದಾನ ಮೃತಪಟ್ಟವರಿಗೂ ಹೋಗುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ಹಣ ಹಂಚಿಕೆಯಲ್ಲಿ ಭಾರೀ ಎಡವಟ್ಟು ಆಗಿರುವುದು ಬೆಳಕಿಗೆ ಬಂದಿದೆ. ಸರ್ಕಾರದ ಸಿಎಜಿ ವರದಿಯಲ್ಲಿ ಈ ಲೋಪ ಬಹಿರಂಗವಾಗಿದ್ದು, ಎರಡು ವರ್ಷಗಳ ಅವಧಿಯಲ್ಲಿ ಸುಮಾರು 75,000 ಕೋಟಿ ರು. ವಿತರಣೆಯಾಗಿದ್ದು ಸಾವಿರಾರು ಕೋಟಿ ವ್ಯತ್ಯಯ ಉಂಟಾಗಿರುವ ಬಗ್ಗೆ ಪ್ರಶ್ನೆ ಕೇಳಿಬಂದಿದೆ.
ಸಿಎಜಿ ಡೇಟಾ ಅನಾಲಿಟಿಕ್ಸ್ ವಿಭಾಗವು ನಡೆಸಿದ ವಿಶೇಷ ಆಡಿಟ್ನಲ್ಲಿ ಈ ಅಂಶಗಳು ಪತ್ತೆಯಾಗಿದ್ದು, ಸಾವಿರಾರು ಜನರಿಗೆ ನಿಯಮಬಾಹಿರವಾಗಿ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಆಡಿಟ್ ವರದಿ ಪ್ರಕಾರ ಸುಮಾರು 19,020 ಫಲಾನುಭವಿಗಳು ಒಂದೇ ಬ್ಯಾಂಕ್ ಖಾತೆಗೆ ಅಟ್ಯಾಚ್ ಆಗಿದ್ದಾರೆ. ಒಬ್ಬ ಫಲಾನುಭವಿಗೆ ಒಂದು ಖಾತೆ ಎನ್ನುವ ನಿಯಮವಿದ್ದರೂ, ಈ ಪ್ರಮಾಣದ ಹಣ ಒಂದೇ ಖಾತೆಯೊಂದಿಗೆ ಜೋಡಣೆಯಾಗಿದ್ದು ಹೇಗೆ ಮತ್ತು ಈ ಬಗ್ಗೆ ಇಲಾಖೆ ಏಕೆ ಕ್ರಮ ವಹಿಸಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
ಇದರೊಂದಿಗೆ 23,262 ಫಲಾನುಭವಿಗಳಿಗೆ ಬ್ಯಾಂಕ್ ಖಾತೆಯೇ ಇಲ್ಲದಿದ್ದರೂ ಅವರ ಹೆಸರಿಯಲ್ಲಿ 46.52 ಕೋಟಿ ರುಪಾಯಿ ಹಣ ಸಂದಾಯವಾಗಿದೆ. ಬ್ಯಾಂಕ್ ಖಾತೆ ಇಲ್ಲದಿದ್ದಾಗ ಡಿಬಿಟಿ ಮೂಲಕ ಹಣ ವರ್ಗಾವಣೆ ಹೇಗೆ ಸಾಧ್ಯ? ಇದು ತಾಂತ್ರಿಕ ಸಮಸ್ಯೆಯೋ ಅಥವಾ ವ್ಯವಸ್ಥಿತ ಭ್ರಷ್ಟಾಚಾರವೋ ಎನ್ನುವ ಅನುಮಾನ ಶುರುವಾಗಿದೆ. ಈ ಗಂಭೀರ ಲೋಪಗಳು ಕಾಣಿಸಿದ ಬೆನ್ನಲ್ಲೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡುವಂತೆ ಸಿಎಜಿ ವಿವರಣೆ ಕೇಳಿದ್ದರೂ, ಸೂಕ್ತ ಮಾಹಿತಿ ನೀಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಮಾಹಿತಿ ನೀಡದೇ ಇರುವ ಬಗ್ಗೆಯೂ ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಪಲಾನುಭವಿ ಯೋಜನೆಯಡಿ ಈವರೆಗೆ ಒಟ್ಟು 30 ಕಂತು ಪಾವತಿಯಾಗಿದ್ದು, ಇದೇ ಫಲಾನುಭವಿಗಳಿಗೆ ಕೆಲವು ನಿರ್ದಿಷ್ಟ ತಿಂಗಳುಗಳಲ್ಲಿ ಸುಮಾರು 1.80 ಕೋಟಿ ಮೊತ್ತವನ್ನು 8,995 ಖಾತೆಗಳಿಗೆ ಪುನಃ ಪಾವತಿ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಯೋಜನೆಗೆ ಒಳಪಟ್ಟಿರುವ ಫಲಾನುಭವಿಗಳು ಪದೇ ಪದೇ ಬ್ಯಾಂಕ್ ಖಾತೆಗಳನ್ನು ಬದಲಾಯಿಸುತ್ತಿದ್ದು, ಇಂತಹ 10,06,308 ದಾಖಲೆಗಳು ಪತ್ತೆಯಾಗಿದೆ. ರದ್ದುಪಡಿಸಲಾದ ಫಲಾನುಭವಿಗಳ ವಿವರ, ಗುರುತಿನ ಚೀಟಿ, ರದ್ದುಪಡಿಸಿದ ದಿನಾಂಕ ಮತ್ತು ಕಾರಣಗಳನ್ನು ನೀಡಲು ಇಲಾಖೆ ವಿಫಲವಾಗಿದೆ ಎಂದು ಸಿಎಜಿ ಉಲ್ಲೇಖಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ದಾದ ಜೋಶಿ, ಗೃಹಲಕ್ಷ್ಮಿ ಯೋಜನೆ ಕಳ್ಳಾಟವನ್ನು ಸಿಎಜಿ ವರದಿಯೇ ಬಿಚ್ಚಿಟ್ಟಿದೆ. ಜನರ ಹಣವವನ್ನು ಸರ್ಕಾರದ ಹೆಸರಲ್ಲಿ ಹೇಗೆ ರಾಜಾರೋಷವಾಗಿ ಲೂಟಿ ಮಾಡಲಾಗುತ್ತಿದೆ ಎಂಬುದಕ್ಕಿದು ಸ್ಪಷ್ಟ ನಿದರ್ಶನ. ಗೃಹಲಕ್ಷ್ಮಿ ಯೋಜನೆಯಲ್ಲಿ 19,020 ಫಲಾನುಭವಿಗಳಿಗೆ ಕೇವಲ ಒಂದೇ ಒಂದು ಬ್ಯಾಂಕ್ ಖಾತೆ ಜೋಡಿಸಿ, ಜಂಟಿಯಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಕಾಂಗ್ರೆಸ್ ಸರಕಾರದ ದುರಾಡಳಿತದ ಪರಮಾವಧಿ. ಯಾವುದೇ ನೀತಿ, ನಿಯಮಗಳನ್ನು ರಚಿಸಿಕೊಳ್ಳದೇ ಅವೈಜ್ಞಾನಿಕವಾಗಿ ಗ್ಯಾರಂಟಿಗಳನ್ನು ತಂದು ಇದೀಗ ಇಡೀ ರಾಜ್ಯವನ್ನೇ ದಿವಾಳಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm