ಬ್ರೇಕಿಂಗ್ ನ್ಯೂಸ್
26-06-26 05:10 pm HK News Staffer ಕರ್ನಾಟಕ
ಬೆಂಗಳೂರು, ಜೂ 26: ಬಿಡದಿಯಲ್ಲಿ ಟೌನ್ಶಿಪ್ ನಿರ್ಮಾಣಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಒತ್ತಾಯಪೂರ್ವಕವಾಗಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ, ಅವರು ಒಪ್ಪಿಗೆ ಸೂಚಿಸಿದ ಬಳಿಕವೇ ಜಮೀನು ಪಡೆದು ಟೌನ್ಶಿಪ್ ಮಾಡಲು ಈಗಾಗಲೇ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಟೌನ್ಶಿಪ್ ವಿಚಾರದಲ್ಲಿ ರೈತರ ಸಹಮತಿ ಪಡೆದುಕೊಂಡು ಮುಂದೆ ಸಾಗುತ್ತೇವೆಯೇ ಹೊರತು, ಅವರನ್ನು ಒಕ್ಕಲೆಬ್ಬಿಸಿ ಟೌನ್ಶಿಪ್ ಮಾಡುವುದಿಲ್ಲ. ಒಂದು ವೇಳೆ ರೈತರಿಗೆ ಕೊಡುವ ಪರಿಹಾರ ಸಾಕಾಗುತ್ತಿಲ್ಲ ಎಂದು ಅನಿಸಿದರೆ ಹೆಚ್ಚಿಸುವ ಸಾಧ್ಯತೆಯಿದೆ. ಒಟ್ಟಾರೆ ಯಾವುದೇ ಗೊಂದಲ ಇಲ್ಲದೆ ಟೌನ್ಶಿಪ್ ಮಾಡಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
ಎಐ ಹಬ್ಗಳಿಗೆ ಹೆಚ್ಚಿನ ನೀರಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಬಿಡದಿ ಪ್ರದೇಶದ ನೀರಿನ ಲಭ್ಯತೆಯನ್ನು ಮುಂದಿನ 40 ವರ್ಷಗಳ ದೃಷ್ಟಿಯಿಂದ ಸರ್ಕಾರ ಬಳಸಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ, ಎಐ ಸೆಂಟರ್ ಮಾಡುವುದಕ್ಕೆ ಯಾವುದೆಲ್ಲ ಮಾನದಂಡಗಳಿವೆ ಎಂಬುದರ ಸ್ಪಷ್ಟ ಮಾಹಿತಿ ಯಾರಿಗೂ ಗೊತ್ತಿಲ್ಲ. ಈಗ ಅದನ್ನು ನಾವು ಬೇರೆ ಬೇರೆ ಕಡೆ ಪತ್ತೆ ಮಾಡುತ್ತಿದ್ದೇವೆ. ಇದು ಎಐ ಹಬ್ಗಾಗಿ ಮಾಡುತ್ತಿರುವಂಥದ್ದಲ್ಲ. ಬೆಂಗಳೂರಿನ ಮೇಲೆ ಸಂಚಾರದಟ್ಟಣೆ ಸೇರಿದಂತೆ ಅನೇಕ ಒತ್ತಡವಿದೆ. ನೈಸ್ ಪ್ರಾಜೆಕ್ಟ್ ಮಾಡಿದ ಸಂದರ್ಭದಲ್ಲಿ 7 ಟೌನ್ಶಿಪ್ ಮಾಡಬೇಕು ಎಂಬ ಪ್ರಸ್ತಾವನೆ ಬಂದಿತ್ತು. ಇದರ ಉದ್ದೇಶ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಮಾಡಬೇಕು ಎನ್ನುವುದಾಗಿತ್ತು. ಪಕ್ಕದಲ್ಲಿರುವ ಕೋಲಾರ, ತುಮಕೂರು, ರಾಮನಗರ ಪಟ್ಟಣವನ್ನು ಅಭಿವೃದ್ಧಿ ಮಾಡಿದರೆ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಯಾಗಲಿದೆ ಎನ್ನುವುದು ನಮ್ಮ ಉದ್ದೇಶ. ಈ ಕಾರಣಗಳಿಂದ ಬಿಡದಿ ಟೌನ್ಶಿಪ್ ಆದರೆ ಸ್ವಲ್ಪ ಸುಧಾರಿಸಬಹುದು ಎಂದು ಅವರು ವಿವರಿಸಿದರು.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm