ಬ್ರೇಕಿಂಗ್ ನ್ಯೂಸ್
07-01-21 12:12 pm Bangalore Correspondent ಕರ್ನಾಟಕ
ಬೆಂಗಳೂರು, ಜ.7 : ಜನವರಿ ತಿಂಗಳಲ್ಲಿ ಈ ರೀತಿ ಅನಿರೀಕ್ಷಿತ ಮಳೆಯನ್ನು ಕಳೆದ 30 ವರ್ಷಗಳಲ್ಲೇ ಕಂಡಿಲ್ಲ, ದಾಖಲೆಗಳನ್ನು ಕೆದಕಿದರೆ ಎಲ್ಲೋ ಮುನಾರ್ಲ್ಕು ಬಾರಿ ತುಂತುರು ಮಳೆ ಸುರಿದ ಅಂಕಿ ಅಂಶ ಸಿಗುತ್ತದೆ ಎಂದು ಹವಾಮಾನ ಇಲಾಖೆ ಜನವರಿ 6ರಂದು ರಾಜ್ಯದ ಹಲವೆಡೆ ಸುರಿದ ಮಳೆ ಬಗ್ಗೆ ವಿವರ ನೀಡಿದೆ. ರಾಜ್ಯದ ಹಲವೆಡೆ ನಿನ್ನೆ ತುಂತುರು ಮಳೆಯಾಯಿತು. ಇನ್ನೂ ನಾಲ್ಕು ದಿನ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜನವರಿಯಲ್ಲಿ ಉಂಟಾದ ಅನಿರೀಕ್ಷಿತ ಮಳೆಗೆ ಕಾರಣವೇನು..?, ಎಲ್ಲೆಲ್ಲಿ ಎಷ್ಟೇಷ್ಟು ದಿನ ಮಳೆಯಾಗುತ್ತೆ ಅನ್ನೋದನ್ನು ನೋಡೋಣ.
ದಿಢೀರ್ ಮಳೆಯಾಗಲು ಕಾರಣವೇನು...?
ದಿಢೀರ್ ಮಳೆಗೆ ಪೂರ್ವ ಅಲೆಗಳೇ ಪ್ರಮುಖ ಕಾರಣ. ಚಳಿಗಾಲದಲ್ಲಿ ಸಾಮಾನ್ಯವಾಗಿ ಜನವರಿ ಮತ್ತು ಫೆಬ್ರವರಿ ಅವಧಿಯಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸುವುದರಿಂದ ಆಗಾಗ ಮಳೆ ಸುರಿಯುತ್ತದೆ. ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪ್ರಬಲವಾಗಿರೋದ್ರಿಂದ ಮಳೆಯಾಗುತ್ತಿದೆ. ರಾತ್ರಿ ಹಾಗೂ ಹಗಲು ತಾಪಮಾನ ಒಂದೇ ಆಗಿರೋದ್ರಿಂದ ಚಳಿಯ ಪ್ರಮಾಣ ಹೆಚ್ಚಿದೆ.

ಎಷ್ಟು ವರ್ಷಕೊಮ್ಮೆ ಜನವರಿ ತಿಂಗಳಲ್ಲಿ ಮಳೆಯಾಗುತ್ತೆ...?
ಹವಾಮಾನ ತಜ್ಞರು ಹೇಳೋ ಪ್ರಕಾರ 30 ವರ್ಷದಲ್ಲಿ 4- 5 ಬಾರಿ ಜನವರಿಯಲ್ಲಿ ಮಳೆಯಾಗಿರಬಹುದೆಂದು ಅಂದಾಜಿಸಿದ್ದಾರೆ.


ರಾಜ್ಯದ ಯಾವ ಯಾವ ಭಾಗಗಳಲ್ಲಿ ಎಷ್ಟು ದಿನ ಮಳೆಯಾಗಲಿದೆ...?
ಹವಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅಲ್ಲಲ್ಲಿ ಮಳೆಯಾಗಿದೆ.
ಜ. 10ರವರೆಗೆ ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಇಂದು ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. 8 ಹಾಗೂ 9 ರಂದು ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.


ರಾಜ್ಯದ ಹಲವೆಡೆ ಬೆಳೆ ನಾಶ, ಜನಜೀವನ ಅಸ್ತವ್ಯಸ್ತ
ಸಂಕ್ರಾಂತಿ ಮುನ್ನ ಬರುತ್ತಿರುವ ಈ ಅಕಾಲಿಕ ಮಳೆಗೆ ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಇನ್ನೊಂದೆಡೆ ಬಯಲು ಸೀಮೆಯ ಚಿತ್ರದುರ್ಗ, ಹೊಸದುರ್ಗ, ಚಳ್ಳಕೆರೆ, ಹಿರಿಯೂರು ಭಾಗದಲ್ಲಿ ನಿರಂತರ ಮಳೆಯಿಂದ ಕೆರೆಗಳು ತುಂಬಿವೆ. ಉತ್ತರ ಒಳನಾಡಿನಲ್ಲೂ ಮಳೆ ಸುರಿಯುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಅಡಿಕೆ, ಭತ್ರ, ಕಾಫಿ ಬೆಳೆ ನಾಶವಾಗಿವೆ.
Heavy Rains in Karnataka Cloudy, gloomy, rainy weather greeted most parts of the State on Wednesday with incessant rains keeping people indoors in Bengaluru and many parts of Coastal Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm